ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯ ಘಟಕದ ಗೌರವ ಅಧ್ಯಕ್ಷ ಚಾಮರಸ ಮಾಲಿಪಾಟೀಲ ಮಾತನಾಡಿ, ಯಾವುದೇ ಹೋರಾಟಕ್ಕೆ ರಾಜಕೀಯ ಇಚ್ಛಾಶಕ್ತಿಯು ಕೂಡಿಕೊಂಡರೆ ಕಾರ್ಯಸಿದ್ಧಿ ಆಗೇ ಆಗುತ್ತದೆ ಎನ್ನುವುದಕ್ಕೆ ಇದು ಕೂಡಾ ಸಾಕ್ಷಿ. ಶಾಸಕ ರಾಜಾ ವೆಂಕಟಪ್ಪ ನಾಯಕ, ಸಂಸದ ರಾಜಾ ಅಮರೇಶ್ವರ ನಾಯಕ ಅವರು ಅಕ್ರಮ ನೀರಾವರಿ ತಡೆಗಟ್ಟಲು ಸರ್ಕಾರದ ಮೇಲೆ ಒತ್ತಡ ಹಾಕಿದ್ದಾರೆ ಎಂದು ಹೇಳಿದರು.