ಆನ್ಲೈನ್ ಮದ್ಯಮಾರಾಟದ ಚಿಂತನೆಯನ್ನು ತಕ್ಷಣವೇ ಕೈಬಿಡಬೇಕು. ಈ ಹಕ್ಕೊತ್ತಾಯಗಳ ಕುರಿತು ಮಹಿಳೆಯರೊಂದಿಗೆ ಮುಖ್ಯಮಂತ್ರಿ ಚರ್ಚಿಸಬೇಕು. ಸತ್ಯಾಗ್ರಹ ತೀವ್ರ ಸ್ವರೂಪ ಪಡೆದುಕೊಳ್ಳಲಿದ್ದು, ಸಾವಿರಾರು ಮಹಿಳೆಯರು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು. ಸ್ವರ್ಣಾ ಭಟ್, ವಿದ್ಯಾ ಪಾಟೀಲ, ಉದಯ, ಮೋಕ್ಷಮ್ಮ, ವಿರುಪಮ್ಮ, ಗುರುರಾಜ, ಎಂ.ಆರ್.ಭೇರಿ, ಪದ್ಮಾ, ಕೆ.ಜಿ.ವೀರೇಶ, ಬಸವರಾಜ ಮತ್ತಿತರರು ಧರಣಿ ನೇತೃತ್ವ ವಹಿಸಿದ್ದಾರೆ.