ರಾಯಚೂರು:ನಗರದ ವಾರ್ಡ್ ಸಂಖ್ಯೆ 11 ರ ವ್ಯಾಪ್ತಿಯ ಬೇರೂನ್ ಕಿಲ್ಲಾ ಬಡಾವಣೆಯಲ್ಲಿ ಕೋಟೆ ಪಕ್ಕದ ಐತಿಹಾಸಿಕ ಕಂದಕ ರಾಜಕಾಲುವೆಯನ್ನು ಮಹಾವೀರ ಸರ್ಕಲ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ವ್ಯವಸ್ಥಿತವಾಗಿ ಅತಿಕ್ರಮಿಸಲಾಗುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಕ್ರಾಂತಿಯೋಗಿ ಬಸವೇಶ್ವರ ಸೇವಾ ಸಂಘವು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದೆ.