<p><strong>ರಾಯಚೂರು:</strong>ನಗರದ ವಾರ್ಡ್ ಸಂಖ್ಯೆ 11 ರ ವ್ಯಾಪ್ತಿಯ ಬೇರೂನ್ ಕಿಲ್ಲಾ ಬಡಾವಣೆಯಲ್ಲಿ ಕೋಟೆ ಪಕ್ಕದ ಐತಿಹಾಸಿಕ ಕಂದಕ ರಾಜಕಾಲುವೆಯನ್ನು ಮಹಾವೀರ ಸರ್ಕಲ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ವ್ಯವಸ್ಥಿತವಾಗಿ ಅತಿಕ್ರಮಿಸಲಾಗುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಕ್ರಾಂತಿಯೋಗಿ ಬಸವೇಶ್ವರ ಸೇವಾ ಸಂಘವು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದೆ.</p>.<p>ಹಾಳುಬಿದ್ದಿರುವ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆ ಹೋಗುತ್ತಿದ್ದರು. ಇಂತಹ ಜಾಗವನ್ನು ಸಹ ಅತಿಕ್ರಮಿಸಲು ಮುಂದಾಗಿರುವುದು ಆತಂಕಕಾರಿ. ಕಾನೂನುಬಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶಕುಮಾರ್ ಕೋರಿದ್ದಾರೆ.</p>.<p><strong>ವರದಿಗೆ ಸೂಚನೆ:</strong> ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದ ಮನವಿಯನ್ನು ಅದೇ ದಿನದಂದು ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಕಳುಹಿಸಲಾಗಿದೆ. ಕೋಶದ ಯೋಜನಾಧಿಕಾರಿ ಕೂಡಾ ಅದೇ ದಿನದಂದು ನಗರಸಭೆಗೆ ದೂರು ವಿವರ ಒಳಗೊಂಡ ಪತ್ರ ಕಳುಹಿಸಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong>ನಗರದ ವಾರ್ಡ್ ಸಂಖ್ಯೆ 11 ರ ವ್ಯಾಪ್ತಿಯ ಬೇರೂನ್ ಕಿಲ್ಲಾ ಬಡಾವಣೆಯಲ್ಲಿ ಕೋಟೆ ಪಕ್ಕದ ಐತಿಹಾಸಿಕ ಕಂದಕ ರಾಜಕಾಲುವೆಯನ್ನು ಮಹಾವೀರ ಸರ್ಕಲ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೂ ವ್ಯವಸ್ಥಿತವಾಗಿ ಅತಿಕ್ರಮಿಸಲಾಗುತ್ತಿದ್ದು, ಕೂಡಲೇ ಈ ಬಗ್ಗೆ ಕ್ರಮ ಜರುಗಿಸಬೇಕು ಎಂದು ಕ್ರಾಂತಿಯೋಗಿ ಬಸವೇಶ್ವರ ಸೇವಾ ಸಂಘವು ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಿದೆ.</p>.<p>ಹಾಳುಬಿದ್ದಿರುವ ಜಾಗದಲ್ಲಿ ಮಹಿಳೆಯರು ಬಹಿರ್ದೆಸೆ ಹೋಗುತ್ತಿದ್ದರು. ಇಂತಹ ಜಾಗವನ್ನು ಸಹ ಅತಿಕ್ರಮಿಸಲು ಮುಂದಾಗಿರುವುದು ಆತಂಕಕಾರಿ. ಕಾನೂನುಬಹಿರ ಕಟ್ಟಡದ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶಕುಮಾರ್ ಕೋರಿದ್ದಾರೆ.</p>.<p><strong>ವರದಿಗೆ ಸೂಚನೆ:</strong> ಜಿಲ್ಲಾಡಳಿತಕ್ಕೆ ಸಲ್ಲಿಸಿದ್ದ ಮನವಿಯನ್ನು ಅದೇ ದಿನದಂದು ಜಿಲ್ಲಾ ನಗರಾಭಿವೃದ್ಧಿ ಕೋಶಕ್ಕೆ ಕಳುಹಿಸಲಾಗಿದೆ. ಕೋಶದ ಯೋಜನಾಧಿಕಾರಿ ಕೂಡಾ ಅದೇ ದಿನದಂದು ನಗರಸಭೆಗೆ ದೂರು ವಿವರ ಒಳಗೊಂಡ ಪತ್ರ ಕಳುಹಿಸಿದ್ದಾರೆ. ಮುಂದಿನ 24 ಗಂಟೆಗಳಲ್ಲಿ ವರದಿ ಸಲ್ಲಿಸುವಂತೆ ನಗರಸಭೆ ಪೌರಾಯುಕ್ತರಿಗೆ ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>