ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ನೋಟು ಅಮಾನ್ಯೀಕರಣ ಮಾಡಿದ್ದರಿಂದ ದುಡಿಯುವ ಕಾರ್ಮಿಕ ವರ್ಗ, ಮಧ್ಯಮವರ್ಗ, ರೈತಾಪಿ ವರ್ಗದವರನ್ನು ನಷ್ಟ ಅನುಭವಿಸುವಂತೆ ಮಾಡಿದರು. ಜಿಎಸ್ಟಿ ಜಾರಿ ಮಾಡಿ ದೊಡ್ಡ ಕಂಪನಿಗಳು ನಷ್ಟ ಅನುಭವಿಸಿವೆ. ಅನೇಕ ಉದ್ಯೋಗಿಗಳು ಇಂದು ನಿರುದ್ಯೋಗಿಗಳಾಗಿದ್ದಾರೆ. ಕೇಂದ್ರ ಸರ್ಕಾರದ ಸ್ವಾಮ್ಯದಲ್ಲಿರುವ ರೈಲ್ವೆ ಇಲಾಖೆ ವಾಯುಯಾನ ಸೇರಿದಂತೆ ಇನ್ನಿತರ ಇಲಾಖೆಗಳನ್ನು ಖಾಸಗೀಕರಣ ಮಾಡಿ, ಅಂಬಾನಿ, ಅದಾನಿ ಸೇರಿದಂತೆ ಇನ್ನಿತರ ಉದ್ಯಮಿಗಳಿಗೆ ಲಾಭ ಮಾಡಿಕೊಡಲು ಹೊಂಚು ಹಾಕಿದ್ದಾರೆ ಎಂದು ಆರೋಪಿಸಿದರು.