ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಸಾಲಮನ್ನಾ ಮಾಡಲು ಆಗ್ರಹ

Last Updated 19 ಡಿಸೆಂಬರ್ 2019, 13:04 IST
ಅಕ್ಷರ ಗಾತ್ರ

ರಾಯಚೂರು: ನೆರೆ ಸಂತ್ರಸ್ತ ರೈತರಿಗೆ ಪರಿಹಾರ ಧನ ವಿತರಿಸಬೇಕುಹಾಗೂ ರೈತರ ಸಾಲಮನ್ನಾ ಮಾಡಬೇಕು ಎಂದು ಸರ್ವ ಜನಪರ ಸಂಘ ಜಿಲ್ಲಾ ಘಟಕ ಒತ್ತಾಯಿಸಿದೆ.

ಜಿಲ್ಲಾಧಿಕಾರಿ ಕಚೇರಿಯ ಸ್ಥಾನಿಕ ಅಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗೆ ಗುರುವಾರ ಮನವಿ ಸಲ್ಲಿಸಿದ ಅವರು, ಜಿಲ್ಲೆಯಲ್ಲಿ ಕೆಲವು ಭಾಗಗಳಲ್ಲಿ ಅತಿವೃಷ್ಟಿಯಾಗಿದ್ದು; ಇನ್ನು ಕೆಲವೆಡೆ ಮಳೆ ಇಲ್ಲದೆ ಅನಾವೃಷ್ಟಿಯಿಂದ ರೈತರು ನಷ್ಟ ಅನುಭವಿಸುತ್ತಿದ್ದಾರೆ. ನೆರೆ ಸಂತ್ರಸ್ತರಿಗೆ ಸರ್ಕಾರ ಬಿಡುಗಡೆ ಮಾಡಿರುವ ಪರಿಹಾರ ಹಣ ಸಮರ್ಪಕವಾಗಿ ವಿತರಣೆಯಾಗಿಲ್ಲ. ಕೆಲವು ರೈತರಿಗೆ ದೊರೆತರೆ ಇನ್ನು ಕೆಲವು ರೈತರಿಗೆ ಪರಿಹಾರ ಸಿಕ್ಕಿರುವುದಿಲ್ಲ. ಕೂಡಲೇ ಅಧಿಕಾರಿಗಳು ಕೂಲಂಕುಶವಾಗಿ ಪರಿಶೀಲಿಸಿ ಸರ್ಕಾರಕ್ಕೆ ವರದಿ ಸಲ್ಲಿಸಬೇಕು ಎಂದು ಕೇಳಿಕೊಳ್ಳಲಾಗಿದೆ.

ರೈತರು ಈಗಾಗಲೇ ಬ್ಯಾಂಕುಗಳಲ್ಲಿ ಇಲ್ಲಿಯವರೆಗೆ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡಿ ರೈತರ ಕಷ್ಟಕ್ಕೆ ಸರ್ಕಾರ ನೆರವಾಗಬೇಕು ಎಂದು ಒತ್ತಾಯಿಸಿದರು.ಸರ್ವ ಜನಪರ ಸಂಘದ ಜಿಲ್ಲಾಧ್ಯಕ್ಷ ಎ.ವಿಜಯರಾಜ, ಪಿ. ಸೂರ್ಯಪ್ರಕಾಶ, ಬೋಳಬಂಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT