<p><strong>ಜಾಲಹಳ್ಳಿ</strong>: ‘ಬಟ್ಟೆ ಕಳಚಿಕೊಂಡು ದೇವರ ದರ್ಶನ ಮಾಡುವಂತಹ ಸಂಸ್ಕೃತಿ ಅಪ್ಪಿಕೊಳ್ಳುವುದನ್ನು ಜನರು ಬಿಡಬೇಕು. ಹಿಂದಿನ ಪರಂಪರೆಯನ್ನು ಉಳಿಸಿ, ಬೆಳೆಸಬೇಕು’ ಎಂದು ತಿಂಥಣಿ ಬ್ರಿಡ್ಸ್ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮಿ ಹೇಳಿದರು.</p>.<p>ಇಲ್ಲಿನ ತಿಂಥಣಿ ಬ್ರಿಡ್ಜ್ ಗುಡ್ಡದಲ್ಲಿರುವ ಕಲಬುರ್ಗಿ ವಿಭಾಗೀಯ ಕನಕಗುರು ಪೀಠದಲ್ಲಿ ಮೂರು ದಿನಗಳಿಂದ ನಡೆದ ಹಾಲುಮತ ಸಂಸ್ಕೃತಿ ವೈಭವದ ಕೊನೆಯ ದಿನ ಗುರುವಾರ ಆಯೋಜಿಸಿದ್ದ ‘ಸಿದ್ದರಾಮೇಶ್ವರ ಬೊಮ್ಮಗೊಂಡೇಶ್ವರ ಉತ್ಸವ’ದಲ್ಲಿ ಮಾತನಾಡಿದರು.</p>.<p>‘ಮನುಷ್ಯರನ್ನು ಸರಿಮಾನವಾಗಿ ನೋಡುವಂತಹ ಹಾಲಮತ ಸಾಂಸ್ಕೃತಿಯನ್ನು ಮರೆಯಬೇಡಿ. ಪ್ರಸಕ್ತ ದಿನಮಾನಗಳಲ್ಲಿ ರಾಜಕಾರಣದ ನಾಯಕರು ತಮ್ಮ ಮನೆಯ ಬಾಗಿಲು ಕಾಯುವಂತವರಿಗೆ ಎಲ್ಲಾ ಅಧಿಕಾರ ಕಲ್ಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>ಕುರುಬ ಸಮುದಾಯದ ಮುಖಂಡ ವರ್ತೂರ್ ಪ್ರಕಾಶ್ ಮಾತನಾಡಿ, ‘ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಟಕವಾಡುತ್ತಿದೆ. ಯಾರಿಗೂ ಕುರುಬರ ಬಗ್ಗೆ ಕಾಳಜಿ ಇಲ್ಲ. ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಬೇಕಿತ್ತು, ಆದರೆ ಆ ಕೆಲಸ ಅವರು ಮಾಡಲಿಲ್ಲ. ಆದರೆ ಕುರುಬ ಸಮುದಾಯದ ಪ್ರಶ್ನಾತೀತ ನಾಯಕ ಸಿದ್ಧರಾಮಯ್ಯ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಎಸ್ಟಿ ಮೀಸಲಾತಿ ನೀಡಬಹುದು. ಹೀಗಾಗಿ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಕುರುಬರೆಲ್ಲರೂ ಒಗ್ಗಟ್ಟಾಗಬೇಕು’ ಎಂದು ಕರೆ ನೀಡಿದರು.</p>.<p>‘ಎಸ್ಟಿ ಮೀಸಲಾತಿಗಾಗಿ ಸಚಿವ ಈಶ್ವರಪ್ಪ ಹಾಗೂ ಬಿಜೆಪಿ ಸರ್ಕಾರ ನಾಟಕವಾಡುತ್ತಿದೆ. ಈಶ್ವರಪ್ಪ ಅವರಿಗೆ ಸಮುದಾಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಜಾಲಹಳ್ಳಿ</strong>: ‘ಬಟ್ಟೆ ಕಳಚಿಕೊಂಡು ದೇವರ ದರ್ಶನ ಮಾಡುವಂತಹ ಸಂಸ್ಕೃತಿ ಅಪ್ಪಿಕೊಳ್ಳುವುದನ್ನು ಜನರು ಬಿಡಬೇಕು. ಹಿಂದಿನ ಪರಂಪರೆಯನ್ನು ಉಳಿಸಿ, ಬೆಳೆಸಬೇಕು’ ಎಂದು ತಿಂಥಣಿ ಬ್ರಿಡ್ಸ್ ಕನಕಗುರು ಪೀಠದ ಸಿದ್ದರಾಮಾನಂದ ಸ್ವಾಮಿ ಹೇಳಿದರು.</p>.<p>ಇಲ್ಲಿನ ತಿಂಥಣಿ ಬ್ರಿಡ್ಜ್ ಗುಡ್ಡದಲ್ಲಿರುವ ಕಲಬುರ್ಗಿ ವಿಭಾಗೀಯ ಕನಕಗುರು ಪೀಠದಲ್ಲಿ ಮೂರು ದಿನಗಳಿಂದ ನಡೆದ ಹಾಲುಮತ ಸಂಸ್ಕೃತಿ ವೈಭವದ ಕೊನೆಯ ದಿನ ಗುರುವಾರ ಆಯೋಜಿಸಿದ್ದ ‘ಸಿದ್ದರಾಮೇಶ್ವರ ಬೊಮ್ಮಗೊಂಡೇಶ್ವರ ಉತ್ಸವ’ದಲ್ಲಿ ಮಾತನಾಡಿದರು.</p>.<p>‘ಮನುಷ್ಯರನ್ನು ಸರಿಮಾನವಾಗಿ ನೋಡುವಂತಹ ಹಾಲಮತ ಸಾಂಸ್ಕೃತಿಯನ್ನು ಮರೆಯಬೇಡಿ. ಪ್ರಸಕ್ತ ದಿನಮಾನಗಳಲ್ಲಿ ರಾಜಕಾರಣದ ನಾಯಕರು ತಮ್ಮ ಮನೆಯ ಬಾಗಿಲು ಕಾಯುವಂತವರಿಗೆ ಎಲ್ಲಾ ಅಧಿಕಾರ ಕಲ್ಪಿಸುವಂತಹ ಸ್ಥಿತಿ ನಿರ್ಮಾಣವಾಗಿದೆ’ ಎಂದು ಹೇಳಿದರು.</p>.<p>ಕುರುಬ ಸಮುದಾಯದ ಮುಖಂಡ ವರ್ತೂರ್ ಪ್ರಕಾಶ್ ಮಾತನಾಡಿ, ‘ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಟಕವಾಡುತ್ತಿದೆ. ಯಾರಿಗೂ ಕುರುಬರ ಬಗ್ಗೆ ಕಾಳಜಿ ಇಲ್ಲ. ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಬೇಕಿತ್ತು, ಆದರೆ ಆ ಕೆಲಸ ಅವರು ಮಾಡಲಿಲ್ಲ. ಆದರೆ ಕುರುಬ ಸಮುದಾಯದ ಪ್ರಶ್ನಾತೀತ ನಾಯಕ ಸಿದ್ಧರಾಮಯ್ಯ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಎಸ್ಟಿ ಮೀಸಲಾತಿ ನೀಡಬಹುದು. ಹೀಗಾಗಿ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಕುರುಬರೆಲ್ಲರೂ ಒಗ್ಗಟ್ಟಾಗಬೇಕು’ ಎಂದು ಕರೆ ನೀಡಿದರು.</p>.<p>‘ಎಸ್ಟಿ ಮೀಸಲಾತಿಗಾಗಿ ಸಚಿವ ಈಶ್ವರಪ್ಪ ಹಾಗೂ ಬಿಜೆಪಿ ಸರ್ಕಾರ ನಾಟಕವಾಡುತ್ತಿದೆ. ಈಶ್ವರಪ್ಪ ಅವರಿಗೆ ಸಮುದಾಯದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಹೊರ ಬರಲಿ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>