ಕುರುಬ ಸಮುದಾಯದ ಮುಖಂಡ ವರ್ತೂರ್ ಪ್ರಕಾಶ್ ಮಾತನಾಡಿ, ‘ಕುರುಬರಿಗೆ ಎಸ್ಟಿ ಮೀಸಲಾತಿ ನೀಡುವ ಸಂಬಂಧ ಬಿಜೆಪಿ ಹಾಗೂ ಕಾಂಗ್ರೆಸ್ ನಾಟಕವಾಡುತ್ತಿದೆ. ಯಾರಿಗೂ ಕುರುಬರ ಬಗ್ಗೆ ಕಾಳಜಿ ಇಲ್ಲ. ಸಿದ್ದರಾಮಯ್ಯ ಅಧಿಕಾರ ಅವಧಿಯಲ್ಲಿ ಕುರುಬರಿಗೆ ಎಸ್ಟಿ ಮೀಸಲಾತಿ ಕೊಡಿಸಬೇಕಿತ್ತು, ಆದರೆ ಆ ಕೆಲಸ ಅವರು ಮಾಡಲಿಲ್ಲ. ಆದರೆ ಕುರುಬ ಸಮುದಾಯದ ಪ್ರಶ್ನಾತೀತ ನಾಯಕ ಸಿದ್ಧರಾಮಯ್ಯ. ಅವರು ಮತ್ತೆ ಅಧಿಕಾರಕ್ಕೆ ಬಂದರೆ ಎಸ್ಟಿ ಮೀಸಲಾತಿ ನೀಡಬಹುದು. ಹೀಗಾಗಿ ಸಿದ್ದರಾಮಯ್ಯ ಅವರನ್ನು ಮತ್ತೆ ಮುಖ್ಯಮಂತ್ರಿ ಮಾಡಲು ಕುರುಬರೆಲ್ಲರೂ ಒಗ್ಗಟ್ಟಾಗಬೇಕು’ ಎಂದು ಕರೆ ನೀಡಿದರು.