ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಂಡ್ರೆಗೆ ಅವಮಾನ | ಕಾಗೇರಿ ಪದತ್ಯಾಗಕ್ಕೆ ವೀರಶೈವ ಲಿಂಗಾಯತ ಮಹಾಸಭಾ ಒತ್ತಾಯ

Last Updated 18 ಫೆಬ್ರವರಿ 2023, 14:40 IST
ಅಕ್ಷರ ಗಾತ್ರ

ರಾಯಚೂರು: ಪಕ್ಷದ ವಕ್ತಾರರಂತೆ ವರ್ತಿಸಿರುವ ವಿಧಾನಸಭೆ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಆ ಸ್ಥಾನಕ್ಕೆ ಗೌರವ ಕೊಟ್ಟು ಸ್ಥಾನ ತ್ಯಜಿಸಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕವು ಜಿಲ್ಲಾಡಳಿತದ ಮೂಲಕ ರಾಜ್ಯಪಾಲರಿಗೆ ಶನಿವಾರ ಮನವಿ ಸಲ್ಲಿಸಿತು.

ಸಜ್ಜನ ರಾಜಕಾರಣಿ ಮನೆತನದಿಂದ ಬಂದಿರುವ ಭಾಲ್ಕಿ ಶಾಸಕ ಈಶ್ವರ ಖಂಡ್ರೆ ಅವರನ್ನುದ್ದೇಶಿಸಿ ಸಭಾಧ್ಯಕ್ಷರು ಲಘುವಾಗಿ ಮಾತನಾಡಿರುವುದು ಸರಿಯಲ್ಲ. ಯಾವುದೋ ದುರುದ್ದೇಶ ಇಟ್ಟುಕೊಂಡು ಸಭಾಧ್ಯಕ್ಷರು ಮಾತನಾಡಿರುವುದನ್ನು ಸಹಿಸಿಕೊಳ್ಳಲಾಗದು. ವಿಧಾನಸಭೆ ಚುನಾವಣೆ ಹತ್ತಿರವಿರುವ ಸಂದರ್ಭದಲ್ಲಿ ಒಬ್ಬ ಜನನಾಯಕನಿಗೆ ಅವಮಾನ ಮಾಡಿರುವುದನ್ನು ಪ್ರಜ್ಞಾವಂತ ಸಮಾಜ ಸಹಿಸಿಕೊಳ್ಳುವುದಿಲ್ಲ. ಸಭಾಧ್ಯಕ್ಷರು ಆ ಸ್ಥಾನದಲ್ಲಿ ಉಳಿದುಕೊಳ್ಳಬೇಕಾದರೆ ಸಂವಿಧಾನದ ಆಶಯಗಳಿಗೆ ಬದ್ಧರಾಗಿ ನಡೆದುಕೊಳ್ಳಬೇಕು. ಕಾಗೇರಿ ಅವರು ಕೂಡಲೇ ಸ್ಥಾನ ತ್ಯಜಿಸಬೇಕು. ಇಲ್ಲವಾದರೆ ತತ್ವ ನಿಷ್ಠೆ ಬದ್ಧತೆ ಇಲ್ಲದ ರಾಜಕಾರಣಿ ಎಂದು ಭಾವಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ್‌ ಪಾಟೀಲ ಮಿರ್ಜಾಪುರ, ಪರಮೇಶ್ವರ ಸಾಲಿಮಠ, ಶಿವರಣ ಅರಕೇರಿ, ಎಂ,ಭೀಮರೆಡ್ಡಿ, ಚಂದ್ರಶೇಖರ್‌ ಮಿಯಾಪೂರ ಮತ್ತಿತರರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT