<p><strong>ರಾಯಚೂರು:</strong> ‘ವೀರಶೈವ ಲಿಂಗಾಯತ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸಬಾರದು. ನಕಲಿ ಜಾತಿಪ್ರಮಾಣಪತ್ರ ಪಡೆದು ಅಸ್ಪೃಷ್ಯರಿಗೆ ಅನ್ಯಾಯ ಮಾಡುತ್ತಿರುವವರನ್ನು ಜೈಲಿಗೆ ತಳ್ಳಬೇಕು’ ಎಂದು ಮಾಜಿ ಸಚಿವ ಎಚ್. ಆಂಜನೇಯ ಒತ್ತಾಯಿಸಿದರು.</p><p>‘ಲಿಂಗಾಯತ ಜಂಗಮರು ಬೇಡ ಜಂಗಮರೆಂದು ಹೇಳಿಕೊಂಡು ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮೂದಿಸುತ್ತಿದ್ದಾರೆ. ಇದು ಸರಿಯಲ್ಲ. ಅಸ್ಪೃಶ್ಯರಲ್ಲದವರು ಪರಿಶಿಷ್ಟ ಜಾತಿಯ ಪ್ರಮಾಣಪತ್ರ ದುರುಪಯೋಗ ಪಡಿಸಿಕೊಳ್ಳಬಾರದು’ ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p><p>‘ಸುಳ್ಳುಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಚಿವ ಸಂಪುಟ ಸಭೆ ನಡೆಸಿ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸದಂತೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p><p>‘ಮೀಸಲಾತಿಯ ಲಾಭ ಪಡೆಯಲು ಯತ್ನಿಸುತ್ತಿರುವ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಹೋರಾಟ ಮಾಡಲಾಗುವುದು‘ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ‘ವೀರಶೈವ ಲಿಂಗಾಯತ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸಬಾರದು. ನಕಲಿ ಜಾತಿಪ್ರಮಾಣಪತ್ರ ಪಡೆದು ಅಸ್ಪೃಷ್ಯರಿಗೆ ಅನ್ಯಾಯ ಮಾಡುತ್ತಿರುವವರನ್ನು ಜೈಲಿಗೆ ತಳ್ಳಬೇಕು’ ಎಂದು ಮಾಜಿ ಸಚಿವ ಎಚ್. ಆಂಜನೇಯ ಒತ್ತಾಯಿಸಿದರು.</p><p>‘ಲಿಂಗಾಯತ ಜಂಗಮರು ಬೇಡ ಜಂಗಮರೆಂದು ಹೇಳಿಕೊಂಡು ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ನಮೂದಿಸುತ್ತಿದ್ದಾರೆ. ಇದು ಸರಿಯಲ್ಲ. ಅಸ್ಪೃಶ್ಯರಲ್ಲದವರು ಪರಿಶಿಷ್ಟ ಜಾತಿಯ ಪ್ರಮಾಣಪತ್ರ ದುರುಪಯೋಗ ಪಡಿಸಿಕೊಳ್ಳಬಾರದು’ ಎಂದು ಶನಿವಾರ ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದರು.</p><p>‘ಸುಳ್ಳುಜಾತಿ ಪ್ರಮಾಣಪತ್ರ ನೀಡಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ಸರ್ಕಾರ ಸಚಿವ ಸಂಪುಟ ಸಭೆ ನಡೆಸಿ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಎಸ್ಸಿ ಪಟ್ಟಿಗೆ ಸೇರಿಸದಂತೆ ಆದೇಶ ಹೊರಡಿಸಬೇಕು’ ಎಂದು ಒತ್ತಾಯಿಸಿದರು.</p><p>‘ಮೀಸಲಾತಿಯ ಲಾಭ ಪಡೆಯಲು ಯತ್ನಿಸುತ್ತಿರುವ ವೀರಶೈವ ಲಿಂಗಾಯತ ಬೇಡ ಜಂಗಮರನ್ನು ಪರಿಶಿಷ್ಟ ಜಾತಿ ಪಟ್ಟಿಯಿಂದ ಕೈಬಿಡುವಂತೆ ಹೋರಾಟ ಮಾಡಲಾಗುವುದು‘ ಎಂದು ಎಚ್ಚರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>