ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾರುಕಟ್ಟೆ ಪುನರಾರಂಭ

Last Updated 13 ಅಕ್ಟೋಬರ್ 2020, 14:06 IST
ಅಕ್ಷರ ಗಾತ್ರ

ರಾಯಚೂರು: ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ನಗರದ ಉಸ್ಮಾನಿಯಾಯ ತರಕಾರಿ ಮಾರುಕಟ್ಟೆಯನ್ನು ಮಂಗಳವಾರದಿಂದ ಪುನರಾರಂಭಿಸಲಾಗಿದೆ.

ಶಾಸಕ ಡಾ. ಶಿವರಾಜ ಪಾಟೀಲ ಅವರು ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಆನಂತರ ಮಾರುಕಟ್ಟೆಯಲ್ಲಿ ಸಂಚರಿಸಿ, ಗುಂಪು ಗುಂಪಾಗಿ ನಿಲ್ಲದೇ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.

ನಿಯಮ ಉಲ್ಲಂಘಿಸಿದರೆ ಪುನಃ ಮಾರುಕಟ್ಟೆ ಬಂದ್ ಮಾಡುವ ಎಚ್ಚರಿಕೆ ಜಿಲ್ಲಾಧಿಕಾರಿ ನೀಡಿ ಅನುಮತಿ ನೀಡಿದ್ದಾರೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಾರ್ವಜನಿಕರ ಚಲನವಲನ ಮೇಲೆ ನಿಗಾ ಇರಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.

ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ವೈ.ಗೋಪಲರೆಡ್ಡಿ, ಮುಖಂಡರಾದ ರವೀಂದ್ರ ಜಲ್ದಾರ, ಶಶಿರಾಜ ಮಸ್ಕಿ, ಮಹೇಂದ್ರರೆಡ್ಡಿ, ಉಸ್ಮಾನಿಯ ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಮಹಾವೀರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT