<p><strong>ರಾಯಚೂರು:</strong> ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ನಗರದ ಉಸ್ಮಾನಿಯಾಯ ತರಕಾರಿ ಮಾರುಕಟ್ಟೆಯನ್ನು ಮಂಗಳವಾರದಿಂದ ಪುನರಾರಂಭಿಸಲಾಗಿದೆ.</p>.<p>ಶಾಸಕ ಡಾ. ಶಿವರಾಜ ಪಾಟೀಲ ಅವರು ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಆನಂತರ ಮಾರುಕಟ್ಟೆಯಲ್ಲಿ ಸಂಚರಿಸಿ, ಗುಂಪು ಗುಂಪಾಗಿ ನಿಲ್ಲದೇ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ನಿಯಮ ಉಲ್ಲಂಘಿಸಿದರೆ ಪುನಃ ಮಾರುಕಟ್ಟೆ ಬಂದ್ ಮಾಡುವ ಎಚ್ಚರಿಕೆ ಜಿಲ್ಲಾಧಿಕಾರಿ ನೀಡಿ ಅನುಮತಿ ನೀಡಿದ್ದಾರೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಾರ್ವಜನಿಕರ ಚಲನವಲನ ಮೇಲೆ ನಿಗಾ ಇರಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.</p>.<p>ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ವೈ.ಗೋಪಲರೆಡ್ಡಿ, ಮುಖಂಡರಾದ ರವೀಂದ್ರ ಜಲ್ದಾರ, ಶಶಿರಾಜ ಮಸ್ಕಿ, ಮಹೇಂದ್ರರೆಡ್ಡಿ, ಉಸ್ಮಾನಿಯ ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಮಹಾವೀರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಕೋವಿಡ್ ಹಿನ್ನೆಲೆಯಲ್ಲಿ ಕಳೆದ ಆರು ತಿಂಗಳಿಂದ ಬಂದ್ ಆಗಿದ್ದ ನಗರದ ಉಸ್ಮಾನಿಯಾಯ ತರಕಾರಿ ಮಾರುಕಟ್ಟೆಯನ್ನು ಮಂಗಳವಾರದಿಂದ ಪುನರಾರಂಭಿಸಲಾಗಿದೆ.</p>.<p>ಶಾಸಕ ಡಾ. ಶಿವರಾಜ ಪಾಟೀಲ ಅವರು ಬೆಳಿಗ್ಗೆ ಮಾರುಕಟ್ಟೆಗೆ ಭೇಟಿ ನೀಡಿ ಮುನ್ನಚ್ಚರಿಕೆ ಕ್ರಮಗಳನ್ನು ಪರಿಶೀಲಿಸಿದರು. ಆನಂತರ ಮಾರುಕಟ್ಟೆಯಲ್ಲಿ ಸಂಚರಿಸಿ, ಗುಂಪು ಗುಂಪಾಗಿ ನಿಲ್ಲದೇ ಅಂತರ ಕಾಪಾಡಿಕೊಂಡು ಕೋವಿಡ್ ನಿಯಮ ಪಾಲನೆ ಮಾಡಬೇಕು ಎಂದು ಮನವಿ ಮಾಡಿದರು.</p>.<p>ನಿಯಮ ಉಲ್ಲಂಘಿಸಿದರೆ ಪುನಃ ಮಾರುಕಟ್ಟೆ ಬಂದ್ ಮಾಡುವ ಎಚ್ಚರಿಕೆ ಜಿಲ್ಲಾಧಿಕಾರಿ ನೀಡಿ ಅನುಮತಿ ನೀಡಿದ್ದಾರೆ. ಮಾರುಕಟ್ಟೆ ಪ್ರಾಂಗಣದಲ್ಲಿ ಸಿಸಿ ಕ್ಯಾಮರಾ ಅಳವಡಿಸಿ ಸಾರ್ವಜನಿಕರ ಚಲನವಲನ ಮೇಲೆ ನಿಗಾ ಇರಿಸಲಾಗುವುದು ಎಂದು ಶಾಸಕರು ಮಾಹಿತಿ ನೀಡಿದರು.</p>.<p>ನಗರಾಭಿವೃದ್ಧಿ ಪ್ರಾಧೀಕಾರದ ಅಧ್ಯಕ್ಷ ವೈ.ಗೋಪಲರೆಡ್ಡಿ, ಮುಖಂಡರಾದ ರವೀಂದ್ರ ಜಲ್ದಾರ, ಶಶಿರಾಜ ಮಸ್ಕಿ, ಮಹೇಂದ್ರರೆಡ್ಡಿ, ಉಸ್ಮಾನಿಯ ತರಕಾರಿ ವ್ಯಾಪಾರಿಗಳ ಸಂಘದ ಅಧ್ಯಕ್ಷ ಎನ್.ಮಹಾವೀರ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>