<p><strong>ರಾಯಚೂರು:</strong> ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ನಿತ್ಯ ಬಳಕೆಯ ಈರುಳ್ಳಿ ಹಾಗೂ ಮೆಣಸಿನಕಾಯಿ ಈ ವಾರ ಗ್ರಾಹಕರಿಗೆ ಬಿಸಿಮುಟ್ಟಿಸಿವೆ.</p>.<p>ಪ್ರತಿ ಕ್ವಿಂಟಲ್ಗೆ ಬೀನ್ಸ್ ಬೆಲೆ ₹ 4 ಸಾವಿರ ಕಡಿಮೆಯಾಗಿದೆ. ಪ್ರತಿ ಕ್ವಿಂಟಲ್ಗೆ ಹಿರೇಕಾಯಿ, ಟೊಮೆಟೊ ₹ 2 ಸಾವಿರ, ಚವಳೆಕಾಯಿ, ಸೌತೆಕಾಯಿ, ಈರುಳ್ಳಿ, ಬದನೆಕಾಯಿ ದರ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಹೆಚ್ಚಾಗಿದೆ.</p>.<p>ಮೆಣಸಿನಕಾಯಿ, ಡೊಣಮೆಣಸಿನಕಾಯಿ ಹಾಗೂ ಚವಳೆಕಾಯಿ ಪ್ರತಿ ಕೆಜಿಗೆ ₹80 ಮಾರಾಟವಾಗುತ್ತಿದೆ. ಮಳೆಯಿಂದಾಗಿ ಪ್ರಮುಖ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ.</p>.<p>ಬೆಳ್ಳುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಎಲೆಕೋಸು, ಹೂಕೋಸು, ಗಜ್ಜರಿ, ಬೀಟ್ರೂಟ್, ಬೆಂಡೆಕಾಯಿ, ತೊಂಡೆಕಾಯಿ, ಡೊಣಮೆಣಸಿನಕಾಯಿ, ತುಪ್ಪದ ಹಿರೇಕಾಯಿ ಬೆಲೆ ಸ್ಥಿರವಾಗಿದೆ.</p>.<p>ನಗರದ ತರಕಾರಿ ಸಗಟು ಮಾರುಕಟ್ಟೆಗೆ ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ, ಬೈಲಹೊಂಗಲ ಹಾಗೂ ಗೋಕಾಕ ತಾಲ್ಲೂಕಿನಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಜಿಲ್ಲೆಯ ಗಡಿ ಗ್ರಾಮಗಳಿಂದ ಹಿರೇಕಾಯಿ, ಟೊಮೆಟೊ, ಚವಳೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಬಂದಿದೆ.</p>.<p>‘ಒಂದು ವಾರದಿಂದ ಸುರಿಯುತ್ತಿರುವ ಮಳೆ ತರಕಾರಿ ಬೆಲೆಯಲ್ಲಿ ಏರಿಳಿತ ಉಂಟು ಮಾಡಿದೆ. ಗಡಿ ಗ್ರಾಮಗಳಿಂದ ಕಡಿಮೆ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬಂದಿದೆ. ಹೀಗಾಗಿ ಸ್ಪಲ್ಪ ಮಟ್ಟಿಗೆ ಬೆಲೆ ಜಾಸ್ತಿ ಇದೆ’ ಎಂದು ತರಕಾರಿ ವ್ಯಾಪಾರಿ ಲಿಂಗೇಶ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದೆ. ಬಹುತೇಕ ತರಕಾರಿಗಳ ಬೆಲೆ ಸ್ಥಿರವಾಗಿದೆ. ನಿತ್ಯ ಬಳಕೆಯ ಈರುಳ್ಳಿ ಹಾಗೂ ಮೆಣಸಿನಕಾಯಿ ಈ ವಾರ ಗ್ರಾಹಕರಿಗೆ ಬಿಸಿಮುಟ್ಟಿಸಿವೆ.</p>.<p>ಪ್ರತಿ ಕ್ವಿಂಟಲ್ಗೆ ಬೀನ್ಸ್ ಬೆಲೆ ₹ 4 ಸಾವಿರ ಕಡಿಮೆಯಾಗಿದೆ. ಪ್ರತಿ ಕ್ವಿಂಟಲ್ಗೆ ಹಿರೇಕಾಯಿ, ಟೊಮೆಟೊ ₹ 2 ಸಾವಿರ, ಚವಳೆಕಾಯಿ, ಸೌತೆಕಾಯಿ, ಈರುಳ್ಳಿ, ಬದನೆಕಾಯಿ ದರ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಹೆಚ್ಚಾಗಿದೆ.</p>.<p>ಮೆಣಸಿನಕಾಯಿ, ಡೊಣಮೆಣಸಿನಕಾಯಿ ಹಾಗೂ ಚವಳೆಕಾಯಿ ಪ್ರತಿ ಕೆಜಿಗೆ ₹80 ಮಾರಾಟವಾಗುತ್ತಿದೆ. ಮಳೆಯಿಂದಾಗಿ ಪ್ರಮುಖ ತರಕಾರಿ ಬೆಲೆಯಲ್ಲಿ ಹೆಚ್ಚಳವಾಗಿದೆ.</p>.<p>ಬೆಳ್ಳುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಎಲೆಕೋಸು, ಹೂಕೋಸು, ಗಜ್ಜರಿ, ಬೀಟ್ರೂಟ್, ಬೆಂಡೆಕಾಯಿ, ತೊಂಡೆಕಾಯಿ, ಡೊಣಮೆಣಸಿನಕಾಯಿ, ತುಪ್ಪದ ಹಿರೇಕಾಯಿ ಬೆಲೆ ಸ್ಥಿರವಾಗಿದೆ.</p>.<p>ನಗರದ ತರಕಾರಿ ಸಗಟು ಮಾರುಕಟ್ಟೆಗೆ ಮಹಾರಾಷ್ಟ್ರದ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ, ಬೈಲಹೊಂಗಲ ಹಾಗೂ ಗೋಕಾಕ ತಾಲ್ಲೂಕಿನಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಜಿಲ್ಲೆಯ ಗಡಿ ಗ್ರಾಮಗಳಿಂದ ಹಿರೇಕಾಯಿ, ಟೊಮೆಟೊ, ಚವಳೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಬಂದಿದೆ.</p>.<p>‘ಒಂದು ವಾರದಿಂದ ಸುರಿಯುತ್ತಿರುವ ಮಳೆ ತರಕಾರಿ ಬೆಲೆಯಲ್ಲಿ ಏರಿಳಿತ ಉಂಟು ಮಾಡಿದೆ. ಗಡಿ ಗ್ರಾಮಗಳಿಂದ ಕಡಿಮೆ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬಂದಿದೆ. ಹೀಗಾಗಿ ಸ್ಪಲ್ಪ ಮಟ್ಟಿಗೆ ಬೆಲೆ ಜಾಸ್ತಿ ಇದೆ’ ಎಂದು ತರಕಾರಿ ವ್ಯಾಪಾರಿ ಲಿಂಗೇಶ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>