<p><strong>ರಾಯಚೂರು:</strong> ಮಾರುಕಟ್ಟೆಯಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಬಹುತೇಕ ತರಕಾರಿ ಬೆಲೆ ಸ್ಥಿರವಾಗಿದೆ. ಗ್ರಾಹಕರ ಅಚ್ಚುಮೆಚ್ಚಿನ ತರಕಾರಿ ಬೆಲೆ ಮಾತ್ರ ಇಳಿದಿಲ್ಲ.</p>.<p>ಅಡಿಗೆಗೆ ನಿತ್ಯ ಅಗತ್ಯವಿರುವ ಮೆಣಸಿನಕಾಯಿ, ಗೋಬಿ ಮಂಚೂರಿಗೆ ಹೆಚ್ಚು ಬಳಸುತ್ತಿರುವ ಎಲೆಕೋಸು ಹಾಗೂ ಹಿರೇಕಾಯಿ ಪ್ರತಿ ಕೆ.ಜಿಗೆ ₹ 60ಗೆ ಮಾರಾಟವಾಗುತ್ತಿದೆ. ಗ್ರಾಹಕರು ಪ್ರರ್ಯಾಯ ಇಲ್ಲದೇ ಅನಿವಾರ್ಯವಾಗಿ ಕೊಂಡು ಕೊಳ್ಳಬೇಕಾಗಿದೆ.</p>.<p>ಹೂಕೋಸು, ಬೆಂಡೆಕಾಯಿ, ಡೊಣಮೆಣಸಿನಕಾಯಿ, ತುಪ್ಪದ ಹಿರೇಕಾಯಿ, ಚವಳೆಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಹೆಚ್ಚಾಗಿದೆ. ಸೌತೆಕಾಯಿ ಮಾತ್ರ ಕ್ವಿಂಟಲ್ಗೆ ₹ 500 ಹೆಚ್ಚಳವಾಗಿದೆ. ಗಜ್ಜರಿ ಬೆಲೆ ಪ್ರತಿ ಕ್ವಿಂಟಲ್ಗೆ ₹1 ಸಾವಿರ ಕಡಿಮೆಯಾಗಿದೆ.</p>.<p>ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಬೀಟ್ರೂಟ್, ಬೀನ್ಸ್, ಟೊಮೆಟೊ, ಬದನೆಕಾಯಿ, ಹಿರೇಕಾಯಿ ಬೆಲೆ ಸ್ಥಿರವಾಗಿದೆ.</p>.<p>ನಗರದ ತರಕಾರಿ ಸಗಟು ಮಾರುಕಟ್ಟೆಗೆ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ ಸೊಪ್ಪು, ರಾಯಚೂರು ಗಡಿ ಗ್ರಾಮಗಳಿಂದ ಹಿರೇಕಾಯಿ, ಟೊಮೆಟೊ, ಚವಳೆಕಾಯಿ, ಸೋರೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಬಂದಿದೆ.</p>.<p>‘ರಾಯಚೂರು ತಾಲ್ಲೂಕಿನ ಗ್ರಾಮಗಳಿಂದ ಕಡಿಮೆ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬಂದಿದೆ. ಹೊರ ಜಿಲ್ಲೆಗಳಿಂದ ಬಂದಿರುವ ತರಕಾರಿಗೆ ಸ್ಪಲ್ಪ ಮಟ್ಟಿಗೆ ಬೆಲೆ ಜಾಸ್ತಿ ಇದೆ’ ಎಂದು ತರಕಾರಿ ವ್ಯಾಪಾರಿ ಮಹ್ಮದ್ ಖಾಜಾ ಹುಸೇನಿ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಮಾರುಕಟ್ಟೆಯಲ್ಲಿ ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ಬಹುತೇಕ ತರಕಾರಿ ಬೆಲೆ ಸ್ಥಿರವಾಗಿದೆ. ಗ್ರಾಹಕರ ಅಚ್ಚುಮೆಚ್ಚಿನ ತರಕಾರಿ ಬೆಲೆ ಮಾತ್ರ ಇಳಿದಿಲ್ಲ.</p>.<p>ಅಡಿಗೆಗೆ ನಿತ್ಯ ಅಗತ್ಯವಿರುವ ಮೆಣಸಿನಕಾಯಿ, ಗೋಬಿ ಮಂಚೂರಿಗೆ ಹೆಚ್ಚು ಬಳಸುತ್ತಿರುವ ಎಲೆಕೋಸು ಹಾಗೂ ಹಿರೇಕಾಯಿ ಪ್ರತಿ ಕೆ.ಜಿಗೆ ₹ 60ಗೆ ಮಾರಾಟವಾಗುತ್ತಿದೆ. ಗ್ರಾಹಕರು ಪ್ರರ್ಯಾಯ ಇಲ್ಲದೇ ಅನಿವಾರ್ಯವಾಗಿ ಕೊಂಡು ಕೊಳ್ಳಬೇಕಾಗಿದೆ.</p>.<p>ಹೂಕೋಸು, ಬೆಂಡೆಕಾಯಿ, ಡೊಣಮೆಣಸಿನಕಾಯಿ, ತುಪ್ಪದ ಹಿರೇಕಾಯಿ, ಚವಳೆಕಾಯಿ ಬೆಲೆ ಪ್ರತಿ ಕ್ವಿಂಟಲ್ಗೆ ₹ 1 ಸಾವಿರ ಹೆಚ್ಚಾಗಿದೆ. ಸೌತೆಕಾಯಿ ಮಾತ್ರ ಕ್ವಿಂಟಲ್ಗೆ ₹ 500 ಹೆಚ್ಚಳವಾಗಿದೆ. ಗಜ್ಜರಿ ಬೆಲೆ ಪ್ರತಿ ಕ್ವಿಂಟಲ್ಗೆ ₹1 ಸಾವಿರ ಕಡಿಮೆಯಾಗಿದೆ.</p>.<p>ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ, ಮೆಣಸಿನಕಾಯಿ, ಎಲೆಕೋಸು, ತೊಂಡೆಕಾಯಿ, ಬೀಟ್ರೂಟ್, ಬೀನ್ಸ್, ಟೊಮೆಟೊ, ಬದನೆಕಾಯಿ, ಹಿರೇಕಾಯಿ ಬೆಲೆ ಸ್ಥಿರವಾಗಿದೆ.</p>.<p>ನಗರದ ತರಕಾರಿ ಸಗಟು ಮಾರುಕಟ್ಟೆಗೆ ನಾಸಿಕ್ನಿಂದ ಈರುಳ್ಳಿ ಹಾಗೂ ಬೆಳ್ಳುಳ್ಳಿ ಆವಕವಾಗಿದೆ. ಬೆಳಗಾವಿ ಜಿಲ್ಲೆಯಿಂದ ಹಸಿ ಮೆಣಸಿನಕಾಯಿ, ಕೊತಂಬರಿ, ಮೆಂತೆ ಸೊಪ್ಪು, ರಾಯಚೂರು ಗಡಿ ಗ್ರಾಮಗಳಿಂದ ಹಿರೇಕಾಯಿ, ಟೊಮೆಟೊ, ಚವಳೆಕಾಯಿ, ಸೋರೆಕಾಯಿ, ಸೌತೆಕಾಯಿ, ಎಲೆಕೋಸು, ಹೂಕೋಸು ಬಂದಿದೆ.</p>.<p>‘ರಾಯಚೂರು ತಾಲ್ಲೂಕಿನ ಗ್ರಾಮಗಳಿಂದ ಕಡಿಮೆ ಪ್ರಮಾಣದಲ್ಲಿ ತರಕಾರಿ ಮಾರುಕಟ್ಟೆಗೆ ಬಂದಿದೆ. ಹೊರ ಜಿಲ್ಲೆಗಳಿಂದ ಬಂದಿರುವ ತರಕಾರಿಗೆ ಸ್ಪಲ್ಪ ಮಟ್ಟಿಗೆ ಬೆಲೆ ಜಾಸ್ತಿ ಇದೆ’ ಎಂದು ತರಕಾರಿ ವ್ಯಾಪಾರಿ ಮಹ್ಮದ್ ಖಾಜಾ ಹುಸೇನಿ ಹೇಳುತ್ತಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>