<p><strong>ರಾಯಚೂರು:</strong> ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ವೆಂಕಟೇಶ ಹೊಗಿಬಂಡಿ ಅವರು 2026ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.</p><p>ಸಿಂಧನೂರು ಮೂಲದ ವೆಂಕಟೇಶ ಅವರು 2004ರಲ್ಲಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ನೇಮಕಗೊಂಡು ಒಂದು ವರ್ಷ ಸೇವೆ ಸಲ್ಲಿಸಿದರು. ನಂತರ 2006ರಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ನೇಮಕಾತಿ ಹೊಂದಿ, 2010 ರವರೆಗೆ ಸೇವೆ ಸಲ್ಲಿಸಿದ್ದಾರೆ.</p><p>2010ರಲ್ಲಿ ಕೆಪಿಎಸ್ಸಿ ಮೂಲಕ ನೇಮಕಾತಿ ಹೊಂದಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಯಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಬೀದರ್ ಜಿಲ್ಲೆಯಲ್ಲಿ 2017 ರವರೆಗೆ ಸೇವೆ ಸಲ್ಲಿಸಿದ್ದಾರೆ.</p><p>ನಂತರ 2017ರ ಅ.4ರಂದು ಡಿವೈಎಸ್ಪಿ (ಸಿವಿಲ್) ಹುದ್ದೆಗೆ ನೇಮಕಾತಿ ಹೊಂದಿ, ಕೆ.ಪಿ.ಎ ಮೈಸೂರಿನಲ್ಲಿ ಯಶಸ್ವಿಯಾಗಿ ಬುನಾದಿ ತರಬೇತಿ ಪಡೆದರು. ತರಬೇತಿ ಅವಧಿಯಲ್ಲಿ ಅತ್ಯುತ್ತಮ ಗುರಿಕಾರರಾಗಿ ಹೊರ ಹೊಮ್ಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p><p>ಸುರಪುರ, ರಾಯಚೂರು ಹಾಗೂ ಸಿರಗುಪ್ಪದಲ್ಲಿ ಸೇವೆ ಸಲ್ಲಿಸಿದ್ದು, 2025ರ ಡಿ.7ರಂದು ರಾಯಚೂರು ಸೈಬರ್ ಕ್ರೈಂ ಪೊಲೀಸ್ ಠಾಣೆ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಪಡೆದ ಕವಿತಾಳ ಪೊಲೀಸ್ ಠಾಣೆಯ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸೈಬರ್ಕ್ರೈಮ್ ಠಾಣೆಯ ಡಿವೈಎಸ್ಪಿ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅತಿ ಹೆಚ್ಚು ಪ್ರಕರಣಗಳ ವಿಲೇವಾರಿ ಮಾಡಿದ್ದಾರೆ. ಹಲವು ಪ್ರಕರಣಗಳಲ್ಲಿ ಫಿರ್ಯಾದಿದಾರರಿಗೆ ಅಪರಾಧಿಗಳಿಂದ ಹಣ ಮರಳಿ ಕೊಡಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು:</strong> ಇಲ್ಲಿನ ಸೈಬರ್ ಕ್ರೈಂ ಪೊಲೀಸ್ ಠಾಣೆಯ ಡಿವೈಎಸ್ಪಿ ವೆಂಕಟೇಶ ಹೊಗಿಬಂಡಿ ಅವರು 2026ನೇ ಸಾಲಿನ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಆಯ್ಕೆಯಾಗಿದ್ದಾರೆ.</p><p>ಸಿಂಧನೂರು ಮೂಲದ ವೆಂಕಟೇಶ ಅವರು 2004ರಲ್ಲಿ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಕಾನ್ಸ್ಟೆಬಲ್ ಆಗಿ ನೇಮಕಗೊಂಡು ಒಂದು ವರ್ಷ ಸೇವೆ ಸಲ್ಲಿಸಿದರು. ನಂತರ 2006ರಲ್ಲಿ ಪ್ರೌಢಶಾಲಾ ಶಿಕ್ಷಕರಾಗಿ ನೇಮಕಾತಿ ಹೊಂದಿ, 2010 ರವರೆಗೆ ಸೇವೆ ಸಲ್ಲಿಸಿದ್ದಾರೆ.</p><p>2010ರಲ್ಲಿ ಕೆಪಿಎಸ್ಸಿ ಮೂಲಕ ನೇಮಕಾತಿ ಹೊಂದಿ, ತಾಲ್ಲೂಕು ಸಮಾಜ ಕಲ್ಯಾಣ ಅಧಿಕಾರಿಯಾಗಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಬೀದರ್ ಜಿಲ್ಲೆಯಲ್ಲಿ 2017 ರವರೆಗೆ ಸೇವೆ ಸಲ್ಲಿಸಿದ್ದಾರೆ.</p><p>ನಂತರ 2017ರ ಅ.4ರಂದು ಡಿವೈಎಸ್ಪಿ (ಸಿವಿಲ್) ಹುದ್ದೆಗೆ ನೇಮಕಾತಿ ಹೊಂದಿ, ಕೆ.ಪಿ.ಎ ಮೈಸೂರಿನಲ್ಲಿ ಯಶಸ್ವಿಯಾಗಿ ಬುನಾದಿ ತರಬೇತಿ ಪಡೆದರು. ತರಬೇತಿ ಅವಧಿಯಲ್ಲಿ ಅತ್ಯುತ್ತಮ ಗುರಿಕಾರರಾಗಿ ಹೊರ ಹೊಮ್ಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ.</p><p>ಸುರಪುರ, ರಾಯಚೂರು ಹಾಗೂ ಸಿರಗುಪ್ಪದಲ್ಲಿ ಸೇವೆ ಸಲ್ಲಿಸಿದ್ದು, 2025ರ ಡಿ.7ರಂದು ರಾಯಚೂರು ಸೈಬರ್ ಕ್ರೈಂ ಪೊಲೀಸ್ ಠಾಣೆ ಡಿವೈಎಸ್ಪಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಅತ್ಯುತ್ತಮ ಪೊಲೀಸ್ ಠಾಣೆ ಪ್ರಶಸ್ತಿ ಪಡೆದ ಕವಿತಾಳ ಪೊಲೀಸ್ ಠಾಣೆಯ ನೋಡಲ್ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದಾರೆ. ಸೈಬರ್ಕ್ರೈಮ್ ಠಾಣೆಯ ಡಿವೈಎಸ್ಪಿ ಅಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಅತಿ ಹೆಚ್ಚು ಪ್ರಕರಣಗಳ ವಿಲೇವಾರಿ ಮಾಡಿದ್ದಾರೆ. ಹಲವು ಪ್ರಕರಣಗಳಲ್ಲಿ ಫಿರ್ಯಾದಿದಾರರಿಗೆ ಅಪರಾಧಿಗಳಿಂದ ಹಣ ಮರಳಿ ಕೊಡಿಸಿದ್ದಾರೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>