<p><strong>ತುರ್ವಿಹಾಳ:</strong> ಪಟ್ಟಣದ ಪಶು ಆರೋಗ್ಯ ಕೇಂದ್ರದಲ್ಲಿ 5 ವರ್ಷದಿಂದ ಕಾಯಂ ವೈದ್ಯರಿಲ್ಲದ ಕಾರಣ, ರೈತರು ಜಾನುವಾರುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.</p>.<p>ತುರ್ವಿಹಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲ ಹೊಸಳ್ಳಿ, ಕಲ್ಮಂಗಿ, ಊಮಲುಟಿ, ಗುಂಜಳ್ಳಿ ಪಂಚಾಯತಿ ವ್ಯಾಪ್ತಿಯ 35 ಗ್ರಾಮಗಳ ರೈತರು ಇಲ್ಲಿನ ಪಶು ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ. ಆದರೆ, ಕಾಯಂ ವೈದ್ಯರು, ಸಿಬ್ಬಂದಿ ಇಲ್ಲ. ಇದರಿಂದಾಗಿ ಈ ಭಾಗದಲ್ಲಿನ ಸುಮಾರು 50 ಸಾವಿರ ಕುರಿಗಳು ಮತ್ತು 30 ಸಾವಿರ ಜಾನುವಾರುಗಳು ರಕ್ಷಣೆಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಜಾನುವಾರುಗಳಿಗೆ ಕಾಲುಬಾಯಿ ರೋಗ, ಗಳಲೆ ರೋಗ, ಚಪ್ಪೆರೋಗ, ನರಡಿರೋಗ, ಚರ್ಮ ಗಂಟುರೋಗ, ಸೇರಿದಂತೆ ಅನೇಕ ರೋಗಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಜಾನುವಾರುಗಳು ಸಾವನ್ನಪ್ಪುತ್ತಿವೆ. ಇದರಿಂದ ಹೈನುಗಾರಿಕೆ, ಕುರಿ ಸಾಗಾಣಿಕೆಯಂತ ಸ್ವಾವಲಂಬಿ ಜೀವನ ನಡೆಸುವ ರೈತ ಕುಟುಂಬಗಳು ತೊಂದರೆ ಅನುಭವಿಸುತ್ತಿವೆ.</p>.<p>ಪಟ್ಟಣ ಪಂಚಾಯಿತಿ ಆದ ಮೇಲೆ ಕಾಯಂ ಪಶು ವೈದ್ಯರು ಬರಬಹುದು ಎನ್ನುವ ಜನರ ಆಶಾ ಭಾವನೆ ಹುಸಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರ್ವಿಹಾಳ:</strong> ಪಟ್ಟಣದ ಪಶು ಆರೋಗ್ಯ ಕೇಂದ್ರದಲ್ಲಿ 5 ವರ್ಷದಿಂದ ಕಾಯಂ ವೈದ್ಯರಿಲ್ಲದ ಕಾರಣ, ರೈತರು ಜಾನುವಾರುಗಳಿಗೆ ಸಕಾಲದಲ್ಲಿ ಚಿಕಿತ್ಸೆ ಕೊಡಿಸಲು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.</p>.<p>ತುರ್ವಿಹಾಳ ಪಟ್ಟಣ ಸೇರಿದಂತೆ ಸುತ್ತಮುತ್ತಲ ಹೊಸಳ್ಳಿ, ಕಲ್ಮಂಗಿ, ಊಮಲುಟಿ, ಗುಂಜಳ್ಳಿ ಪಂಚಾಯತಿ ವ್ಯಾಪ್ತಿಯ 35 ಗ್ರಾಮಗಳ ರೈತರು ಇಲ್ಲಿನ ಪಶು ಆರೋಗ್ಯ ಕೇಂದ್ರವನ್ನೇ ಅವಲಂಬಿಸಿದ್ದಾರೆ. ಆದರೆ, ಕಾಯಂ ವೈದ್ಯರು, ಸಿಬ್ಬಂದಿ ಇಲ್ಲ. ಇದರಿಂದಾಗಿ ಈ ಭಾಗದಲ್ಲಿನ ಸುಮಾರು 50 ಸಾವಿರ ಕುರಿಗಳು ಮತ್ತು 30 ಸಾವಿರ ಜಾನುವಾರುಗಳು ರಕ್ಷಣೆಗೆ ರೈತರು ಅಲೆದಾಡುವ ಸ್ಥಿತಿ ನಿರ್ಮಾಣವಾಗಿದೆ.</p>.<p>ಜಾನುವಾರುಗಳಿಗೆ ಕಾಲುಬಾಯಿ ರೋಗ, ಗಳಲೆ ರೋಗ, ಚಪ್ಪೆರೋಗ, ನರಡಿರೋಗ, ಚರ್ಮ ಗಂಟುರೋಗ, ಸೇರಿದಂತೆ ಅನೇಕ ರೋಗಗಳಿಗೆ ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಜಾನುವಾರುಗಳು ಸಾವನ್ನಪ್ಪುತ್ತಿವೆ. ಇದರಿಂದ ಹೈನುಗಾರಿಕೆ, ಕುರಿ ಸಾಗಾಣಿಕೆಯಂತ ಸ್ವಾವಲಂಬಿ ಜೀವನ ನಡೆಸುವ ರೈತ ಕುಟುಂಬಗಳು ತೊಂದರೆ ಅನುಭವಿಸುತ್ತಿವೆ.</p>.<p>ಪಟ್ಟಣ ಪಂಚಾಯಿತಿ ಆದ ಮೇಲೆ ಕಾಯಂ ಪಶು ವೈದ್ಯರು ಬರಬಹುದು ಎನ್ನುವ ಜನರ ಆಶಾ ಭಾವನೆ ಹುಸಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>