<p><b>ರಾಯಚೂರು</b><b>:</b> 'ಈ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.</p>.<p>ಸಿಂಧನೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಭಾನುವಾರ ಬೆಳಿಗ್ಗೆ ಕೆ. ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಉಪಹಾರ ಸೇವನೆಗೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಮೈಸೂರಿನಲ್ಲಿಯೆ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುವರು' ಎಂದರು.</p>.<p>'ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ' ಎಂದು ಹೇಳಿದರು. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಸನಗೌಡ ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p><b>ದೇವಸ್ಥಾನ<b> </b>ಭೇಟಿ</b><b>: </b>ಸಿಂಧನೂರು ತಾಲ್ಲೂಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು.</p>.<p><a href="https://www.prajavani.net/karnataka-news/corruption-in-karnataka-state-cm-bs-yediyurappa-files-in-dc-offices-815053.html" itemprop="url">‘ಭ್ರಷ್ಟಾಚಾರ ಇಲ್ಲ ಎಂದು ಹೇಳಲಾರೆ’–ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><b>ರಾಯಚೂರು</b><b>:</b> 'ಈ ಉಪಚುನಾವಣೆಯಲ್ಲಿ ಬಿ.ವೈ. ವಿಜಯೇಂದ್ರ ಅಭ್ಯರ್ಥಿ ಆಗುವುದಿಲ್ಲ' ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.</p>.<p>ಸಿಂಧನೂರಿನಲ್ಲಿ ವಾಸ್ತವ್ಯ ಹೂಡಿದ್ದ ಅವರು, ಭಾನುವಾರ ಬೆಳಿಗ್ಗೆ ಕೆ. ವಿರೂಪಾಕ್ಷಪ್ಪ ಅವರ ಮನೆಯಲ್ಲಿ ಉಪಹಾರ ಸೇವನೆಗೆ ಬಂದಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>'ಮೈಸೂರಿನಲ್ಲಿಯೆ ಉಳಿದುಕೊಳ್ಳುವಂತೆ ಒತ್ತಾಯ ಇರುವುದರಿಂದ, ವಿಜಯೇಂದ್ರ ಅಲ್ಲಿ ಮನೆ ಮಾಡಿಕೊಳ್ಳಲಿದ್ದಾರೆ. ಅಲ್ಲಿದ್ದುಕೊಂಡು ಸುತ್ತಲಿನ ಜಿಲ್ಲೆಗಳಲ್ಲಿ ಪಕ್ಷ ಸಂಘಟನೆ ಮಾಡುವರು' ಎಂದರು.</p>.<p>'ಮಸ್ಕಿ ಹಾಗೂ ಬಸವಕಲ್ಯಾಣದಲ್ಲಿ ಬಿಜೆಪಿ ಈಗಾಗಲೇ ಗೆದ್ದಾಗಿದೆ. ಬೆಳಗಾವಿಯಲ್ಲಿ ಗೆಲ್ಲುವ ತಯಾರಿ ಮಾಡುತ್ತಿದ್ದೇವೆ' ಎಂದು ಹೇಳಿದರು. ಉಪಚುನಾವಣೆ ಬಳಿಕ ಮುಖ್ಯಮಂತ್ರಿ ಬದಲಾವಣೆ ಆಗಲಿದೆ ಎಂದು ಬಸನಗೌಡ ಯತ್ನಾಳ್ ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು.</p>.<p><b>ದೇವಸ್ಥಾನ<b> </b>ಭೇಟಿ</b><b>: </b>ಸಿಂಧನೂರು ತಾಲ್ಲೂಕಿನ ಗೋರೆಬಾಳ ಗ್ರಾಮದ ಶರಣ ಬಸವೇಶ್ವರ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು.</p>.<p><a href="https://www.prajavani.net/karnataka-news/corruption-in-karnataka-state-cm-bs-yediyurappa-files-in-dc-offices-815053.html" itemprop="url">‘ಭ್ರಷ್ಟಾಚಾರ ಇಲ್ಲ ಎಂದು ಹೇಳಲಾರೆ’–ಸಿಎಂ ಯಡಿಯೂರಪ್ಪ </a></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>