ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪ್ರತಾಪಗೌಡ ಮಾರಾಟವಾಗಿಲ್ಲ. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿಆರಂಭದಿಂದಲೂ ತಮ್ಮ ಸ್ವಾಭಿಮಾನಕ್ಕೆ ಧಕ್ಕೆ ಆಗುತ್ತಿರುವ ವಿಷಯ ಅವರು ಪ್ರಸ್ತಾಪಿಸುತ್ತಲೇ ಬಂದಿದ್ದರು. ಮಸ್ಕಿಯಲ್ಲಿ ಬಿಜೆಪಿ ಪರ ವಾತಾವರಣ ಇದೆ. ಪ್ರತಾಪಗೌಡ ಮಾಡಿರುವಅಭಿವೃದ್ಧಿಗೆ ಜನರು ಮತ ನೀಡುತ್ತಾರೆ. ಕಾಂಗ್ರೆಸ್ ಅಪಪ್ರಚಾರದಿಂದ ಗೆಲುವಿಗೆ ಧಕ್ಕೆ ಆಗುವುದಿಲ್ಲ’ ಎಂದರು.