ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಯಚೂರು: ಕಳ್ಳನನ್ನು ಸೆರೆಹಿಡಿದ ಗ್ರಾಮಸ್ಥರು

Last Updated 25 ಡಿಸೆಂಬರ್ 2020, 6:37 IST
ಅಕ್ಷರ ಗಾತ್ರ

ರಾಯಚೂರು: ಕಳ್ಳತನಕ್ಕೆ ಬಂದಿದ್ದ ಮೂವರು ಕಳ್ಳರನ್ನು ಬೆನ್ನಟ್ಟಿದ ಗ್ರಾಮಸ್ಥರು ಒಬ್ಬ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯ ಮಸ್ಕಿ ತಾಲ್ಲೂಕಿನ ಅಮೀನಗಡದಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ಕಲಬುರ್ಗಿ ಜಿಲ್ಲೆಯ ಆಳಂದದಿಂದ ಬಂದಿರುವುದಾಗಿ ಆರೋ‍ಪಿ ಬಾಯ್ಬಿಟ್ಟಿದ್ದು, ಹೆಚ್ಚಿನ ವಿವರ ಗೊತ್ತಾಗಿಲ್ಲ. ಆರೋಪಿಯನ್ನು ಸೆರೆಹಿಡಿದು ಹಗ್ಗದಿಂದ ಎರಡು ಕೈಗಳ್ಳನ್ನು ಬಿಗಿದು, ಜನರು ಮಾಹಿತಿ ಪಡೆಯಲು ಯತ್ನಿಸಿದರೂ ವಿವರ ಹೇಳಿಲ್ಲ. ಆನಂತರ ಪೊಲೀಸ್‌ ಠಾಣೆಗೆ ಕರೆತಂದು ಒಪ್ಪಿಸಲಾಗಿದೆ.

'ಪೊಲೀಸ್‌ ಠಾಣೆಗೆ ದೂರವಾಣಿ ಕರೆಮಾಡಿ ವಿಷಯ ತಿಳಿಸಿದರೂ ಸಮರ್ಪಕ ಪ್ರತಿಕ್ರಿಯೆ ನೀಡಿಲ್ಲ. ಚಳಿ ಇರುವುದರಿಂದ ಈಗ ಬರಲಾಗುವುದಿಲ್ಲ ಎಂದು ಪೊಲೀಸರು ಹೇಳಿದ್ದರಿಂದ ಆರೋಪಿಯನ್ನು ಕವಿತಾಳ ಠಾಣೆಗೆ ಒಪ್ಪಿಸಲಾಗಿದೆ' ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT