ಕವಿತಾಳ: ಪಟ್ಟಣದ 5ನೇ ವಾರ್ಡ್ಗೆ ನೀರು ಪೂರೈಕೆಯಲ್ಲಿ ವ್ಯತ್ಯಯ ಆಗುತ್ತಿದೆ ಎಂದು ಆರೋಪಿಸಿದ ನಿವಾಸಿಗಳು ಸೋಮವಾರ ಪಟ್ಟಣ ಪಂಚಾಯಿತಿ ಮುಂದೆ ಖಾಲಿ ಬಿಂದಿಗೆ ಹಿಡಿದು ಪ್ರತಿಭಟನೆ ನಡೆಸಿದರು.
ವಾರ್ಡ್ ನಿವಾಸಿ ಎಸ್.ಎಂ.ಜಾವಿದ್ ಮಾತನಾಡಿ, ವಾರ್ಡ್ನ ಸುಮಾರು 40 ಮನೆಗಳಿಗೆ ಕಳೆದ ಮೂರು ವರ್ಷಗಳಿಂದ ನೀರಿನ ಸಮಸ್ಯೆ ಕಾಡುತ್ತಿದೆ. ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ‘ಈಚೆಗೆ ಕಾಂಕ್ರಿಟ್ ರಸ್ತೆ ನಿರ್ಮಿಸಿದ್ದರಿಂದ ಪೈಪ್ಲೈನ್ ಅಳವಡಿಸಲು ತೊಂದರೆ ಆಗುತ್ತಿದೆ’ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಸಮಸ್ಯೆ ಬಗೆಹರಿಸಲು ಮುಂದಾಗುತ್ತಿಲ್ಲ ಎಂದು ಆರೋಪಿಸಿದರು.
ಪ.ಪಂ ಸದಸ್ಯ ರುಕ್ಮುದ್ದೀನ್ ಮುಖ್ಯಾ ಧಿಕಾರಿ ಜತೆ ದೂರವಾಣಿ ಮೂಲಕ ಮಾತನಾಡಿ, ‘ಬೇರೆ ಕಡೆ ಯಿಂದ ಪೈಪ್ಅಳವಡಿಸುವ ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದರು.