ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗ್ರಾಮಕ್ಕೆ ಒಳಚರಂಡಿ ಮಾಡಿಸಿ: ಸಚಿವ ಆರ್‌.ಅಶೋಕ್‌ ಮನವಿ

Last Updated 15 ಅಕ್ಟೋಬರ್ 2022, 14:48 IST
ಅಕ್ಷರ ಗಾತ್ರ

ಅರಕೇರಾ (ರಾಯಚೂರು ಜಿಲ್ಲೆ): ಗ್ರಾಮವಾಸ್ತವ್ಯಕ್ಕಾಗಿ ಬಂದಿರುವ ಕಂದಾಯ ಸಚಿವ ಆರ್‌.ಅಶೋಕ್‌ ಅವರು ಅರಕೇರಾ ಗ್ರಾಮದ ಹಿರೇಮಠ ಆವರಣದಲ್ಲಿ ಶನಿವಾರ ಗ್ರಾಮಸಭೆ ನಡೆಸಿದರು.

ಅರಕೇರಾದಲ್ಲಿ ಒಳಚರಂಡಿ ವ್ಯವಸ್ಥೆ ಮಾಡಿಸಬೇಕು. ಸರ್ಕಾರಿ ಪದವಿ ಕಾಲೇಜು ಸ್ಥಾಪಿಸಬೇಕು. ಶಾದಿಮಹಲ್‌ ಮಾಡಿಕೊಡಬೇಕು. ವೀರಶೈವ, ನಾಯಕ ಮತ್ತು ಮುಸ್ಲಿಂ ಸಮುದಾಯಗಳಿಗೆ ಸ್ಮಶಾನಕ್ಕೆ ಭೂಮಿ ಒದಗಿಸಬೇಕು. ಪದವಿಪೂರ್ವ ಕಾಲೇಜಿನಲ್ಲಿ ಎಲ್ಲ ಜಾತಿ ಬಡವರಿಗೆ ಉಚಿತ ಪುಸ್ತಕ ಕೊಡಬೇಕು ಹಾಗೂ ಆದರ್ಶ ವಿದ್ಯಾಲಯಕ್ಕೆ ಶಾಲಾವಾಹನ ಒದಗಿಸಿ ಎಂದು ಗ್ರಾಮಸ್ಥರು ಸಚಿವರ ಎದುರು ಬೇಡಿಕೆಗಳನ್ನು ಸಲ್ಲಿಸಿದರು.

ಸಚಿವರು ಮಾತನಾಡಿ, ಗ್ರಾಮದ ಅಭಿವೃದ್ಧಿಗಾಗಿ ಈಗಾಗಲೇ ₹1 ಕೋಟಿ ಅನುದಾನ ಬಿಡುಗಡೆ ಮಾಡಿದ್ದು, ಅದು ಜಿಲ್ಲಾಡಳಿತದಲ್ಲಿದೆ. ವೀರಶೈವ ಸಮಾಜ ಹಾಗೂ ನಾಯಕ ಸಮುದಾಯಗಳಿಗೆ ಸ್ಮಶಾನಕ್ಕಾಗಿ ನಾಲ್ಕು ಎಕರೆ ಜಮೀನು ಶೀಘ್ರ ಮಂಜೂರಿ ಮಾಡಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT