<p><strong>ರಾಯಚೂರು</strong>: ನಾರಾಯಣಪುರ ಜಲಾಶಯದಲ್ಲಿ ಪ್ರಸ್ತುತ ಶೇಕಡ 80.27ರಷ್ಟು ನೀರು ಸಂಗ್ರಹವಿದ್ದು, ಕೃಷ್ಣಾ ನದಿಗೆ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬಿಡಲಾಗಿದೆ. ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.</p>.<p>ಜಲಾಶಯದ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಿದೆ. ಇನ್ನು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಹೊರಹರಿವನ್ನು 84,445 ಕ್ಯೂಸೆಕ್ನಿಂದ 1.10 ಲಕ್ಷ ಕ್ಯೂಸೆಕ್ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br><br>‘ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು. ಜಾನುವಾರುಗಳನ್ನು ನದಿಗಳಿಗೆ ಇಳಿಸಬಾರದು. ಜನರೂ ನದಿ ನೀರಿಗೆ ಇಳಿಬಾರದು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ನಾರಾಯಣಪುರ ಜಲಾಶಯದಲ್ಲಿ ಪ್ರಸ್ತುತ ಶೇಕಡ 80.27ರಷ್ಟು ನೀರು ಸಂಗ್ರಹವಿದ್ದು, ಕೃಷ್ಣಾ ನದಿಗೆ 1.10 ಲಕ್ಷ ಕ್ಯೂಸೆಕ್ ನೀರು ಹರಿದು ಬಿಡಲಾಗಿದೆ. ನದಿ ಪಾತ್ರದ ಗ್ರಾಮಗಳ ಜನರು ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.</p>.<p>ಜಲಾಶಯದ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ ಅಣೆಕಟ್ಟೆಯ ಹೊರಹರಿವು ಹೆಚ್ಚಾಗಿದೆ. ಇನ್ನು 1,10,000 ಕ್ಯೂಸೆಕ್ ಒಳಹರಿವು ಬರುವ ಸಾಧ್ಯತೆ ಇದೆ. ಶನಿವಾರ ಮಧ್ಯಾಹ್ನ 3 ಗಂಟೆಯಿಂದ ಹೊರಹರಿವನ್ನು 84,445 ಕ್ಯೂಸೆಕ್ನಿಂದ 1.10 ಲಕ್ಷ ಕ್ಯೂಸೆಕ್ಗೆ ಹಂತ ಹಂತವಾಗಿ ಹೆಚ್ಚಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.<br><br>‘ನಾರಾಯಣಪುರ ಅಣೆಕಟ್ಟಿನ ಕೆಳಭಾಗದಲ್ಲಿರುವ ನದಿ ಪಾತ್ರದ ಜನರು ಎಚ್ಚರಿಕೆ ವಹಿಸಬೇಕು. ಜಾನುವಾರುಗಳನ್ನು ನದಿಗಳಿಗೆ ಇಳಿಸಬಾರದು. ಜನರೂ ನದಿ ನೀರಿಗೆ ಇಳಿಬಾರದು’ ಎಂದು ಮನವಿ ಮಾಡಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>