ರಾಯಚೂರು: ನಗರಸಭೆಯ ಪೌರಾಯುಕ್ತ ವೆಂಕಟೇಶ, ಜೈಪಾಲರೆಡ್ಡಿ, ಮೌನೇಶ ಸೇರಿದಂತೆ ಅಧಿಕಾರಿಗಳ ತಂಡವು ಮಹಿಳೆಯು ಹಾಕಿಕೊಂಡಿದ್ದ ತಾತ್ಕಾಲಿಕ ಟಿನ್ ಶೆಡ್ನ್ನುನ್ಯಾಯಾಲಯ ಆದೇಶ ಉಲ್ಲಂಘನೆ ಮಾಡಿ ತೆರವುಗೊಳಿಸಿ ದೌರ್ಜನ್ಯ ಎಸಗಿದೆ. ಈ ಅಧಿಕಾರಿಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿ ಮಹಾಬೋಧಿ ವೃಕ್ಷ ಎಜುಕೇಷನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಮುಖಂಡರು ಜಿಲ್ಲಾಡಳಿತ ಕಚೇರಿಗೆ ಗುರುವಾರ ಮನವಿ ಸಲ್ಲಿಸಿದರು.