ಮಸ್ಕಿ (ರಾಯಚೂರು ಜಿಲ್ಲೆ): ‘ವಿಶ್ವಕರ್ಮ ಸಮಾಜಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ನೀಡುವಂತೆ ಆಗ್ರಹಿಸಿ ಬೀದರ್ನಿಂದ ಬೆಂಗಳೂರಿಗೆ ಶೀಘ್ರವೇ ಪಾದಯಾತ್ರೆ ನಡೆಸಲಾಗುವುದು’ ಎಂದು ವಿಶ್ವಕರ್ಮ ಮಹಾಸಭಾ ವಕ್ತಾರ ಮಾರುತಿ ಬಡಿಗೇರ್ ಅವರು ತಿಳಿಸಿದರು.
‘ರಾಜ್ಯದಲ್ಲಿ 45 ಲಕ್ಷ ವಿಶ್ವಕರ್ಮ ಸಮಾಜದವರಿದ್ದು, ಪರಿಶಿಷ್ಟ ಪಂಗಡ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾದ ಮೇಲೆ ಒತ್ತಡ ಹೇರಲಾಗುವುದು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
ಮಹಾಸಭಾದ ಕಾರ್ಯದರ್ಶಿ ಬ್ರಹ್ಮಗಣೇಶ ವಕೀಲ ಮಾತನಾಡಿ, ‘ವಿಧಾನ ಪರಿಷತ್ ಸದಸ್ಯ ಕೆ.ಪಿ. ನಂಜುಂಡಿ ಅವರಿಗೆ ಸಚಿವ ಸ್ಥಾನ ನೀಡಬೇಕು. ಸಮಾಜಕ್ಕೆ ನ್ಯಾಯ ದೊರಕಿಸಿಕೊಡಬೇಕು’ ಎಂದರು.