<p><strong>ಆರ್ಯಭೋಗಾಪುರ (ಮುದಗಲ್)</strong>: ಸಮೀಪದ ಆರ್ಯಭೋಗಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 21 ಜನರು ಅಸ್ವಸ್ಥರಾಗಿದ್ದಾರೆ.</p>.<p>‘ಕಲುಷಿತ ನೀರು ಸೇವನೆಯೇ ವಾಂತಿ–ಭೇದಿಗೆ ಕಾರಣ. ಅಸ್ವಸ್ಥರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಬಸವ ಮನ್ನಾಪುರ ಹಾಗೂ ಚಂದ್ರಶೇಖರ ತಳವಾರ ತಿಳಿಸಿದರು.</p>.<p>ಮಾಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿರುಪಾಕ್ಷಪ್ಪ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ರೋಗಿಗಳನ್ನು ಪರೀಕ್ಷಿಸಿದರು.</p>.<p>ಮದುವೆ ಊಟ ಮಾಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದೆ ಎಂದು ರೋಗಿಗಳ ಮನೆಯವರು ಹೇಳಿದ್ದರಿಂದ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಮರಳಿದರು.</p>.<p>ಗ್ರಾಮದಲ್ಲಿ ಶನಿವಾರ ರೋಗ ಉಲ್ಬಣಗೊಂಡಿದ್ದರಿಂದ ವೈದ್ಯರು ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಕೊಳವೆಬಾವಿ ನೀರನ್ನು ಪರೀಕ್ಷೆಗೆ ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳಿಸಿದರು.</p>.<p>5 ವರ್ಷಗಳಿಂದ ಮುಚ್ಚಿದ ಕೊಳವೆಬಾವಿ ನೀರು ಸೇವಿಸಬೇಡಿ ಎಂದು ಮನವಿ ಮಾಡಿದರು.</p>.<p>ಕೊಳಚೆ ಪ್ರದೇಶದಲ್ಲಿ ಬ್ಲೀಚಿಂಗ್ ಸಿಂಪಡಿಸಿದ್ದೇವೆ ಎಂದು ವೈದ್ಯ ಡಾ.ವಿರುಪಾಕ್ಷಪ್ಪ ತಿಳಿಸಿದರು.</p>.<p>‘ಆರ್ಯಭೋಗಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ದೂರಿದರು.</p>.<p>ಹೂನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಆರ್ಯಭೋಗಾಪುರ (ಮುದಗಲ್)</strong>: ಸಮೀಪದ ಆರ್ಯಭೋಗಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ 21 ಜನರು ಅಸ್ವಸ್ಥರಾಗಿದ್ದಾರೆ.</p>.<p>‘ಕಲುಷಿತ ನೀರು ಸೇವನೆಯೇ ವಾಂತಿ–ಭೇದಿಗೆ ಕಾರಣ. ಅಸ್ವಸ್ಥರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದು ಗ್ರಾಮ ಪಂಚಾಯಿತಿ ಸದಸ್ಯರಾದ ಶರಣಬಸವ ಮನ್ನಾಪುರ ಹಾಗೂ ಚಂದ್ರಶೇಖರ ತಳವಾರ ತಿಳಿಸಿದರು.</p>.<p>ಮಾಕಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ವಿರುಪಾಕ್ಷಪ್ಪ ಗ್ರಾಮಕ್ಕೆ ಶುಕ್ರವಾರ ಭೇಟಿ ನೀಡಿ ರೋಗಿಗಳನ್ನು ಪರೀಕ್ಷಿಸಿದರು.</p>.<p>ಮದುವೆ ಊಟ ಮಾಡಿದ್ದರಿಂದ ವಾಂತಿ–ಭೇದಿ ಕಾಣಿಸಿಕೊಂಡಿದೆ ಎಂದು ರೋಗಿಗಳ ಮನೆಯವರು ಹೇಳಿದ್ದರಿಂದ ಚಿಕಿತ್ಸೆ ನೀಡಿ ಆಸ್ಪತ್ರೆಗೆ ಮರಳಿದರು.</p>.<p>ಗ್ರಾಮದಲ್ಲಿ ಶನಿವಾರ ರೋಗ ಉಲ್ಬಣಗೊಂಡಿದ್ದರಿಂದ ವೈದ್ಯರು ಮತ್ತೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದಲ್ಲಿನ ಕೊಳವೆಬಾವಿ ನೀರನ್ನು ಪರೀಕ್ಷೆಗೆ ಮುದಗಲ್ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕಳಿಸಿದರು.</p>.<p>5 ವರ್ಷಗಳಿಂದ ಮುಚ್ಚಿದ ಕೊಳವೆಬಾವಿ ನೀರು ಸೇವಿಸಬೇಡಿ ಎಂದು ಮನವಿ ಮಾಡಿದರು.</p>.<p>ಕೊಳಚೆ ಪ್ರದೇಶದಲ್ಲಿ ಬ್ಲೀಚಿಂಗ್ ಸಿಂಪಡಿಸಿದ್ದೇವೆ ಎಂದು ವೈದ್ಯ ಡಾ.ವಿರುಪಾಕ್ಷಪ್ಪ ತಿಳಿಸಿದರು.</p>.<p>‘ಆರ್ಯಭೋಗಾಪುರ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮಾಡಿ ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ’ ಎಂದು ಗ್ರಾಮಸ್ಥರು ದೂರಿದರು.</p>.<p>ಹೂನೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ ಎಂದು ಅವರು ಆರೋಪಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>