<p><strong>ರಾಯಚೂರು: </strong>ಉತ್ತಮ ಜನಪ್ರತಿನಿಧಿಗಳ ಆಯ್ಕೆಗೆ ಮತದಾನದ ಹಕ್ಕು ಅವಶ್ಯಕವಾಗಿದೆ. ಪ್ರಜಾಪ್ರಭುತ್ವದ ಸುಭದ್ರತೆಗೆ 18 ವರ್ಷದತುಂಬಿದ ಎಲ್ಲರೂ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಏರ್ಪಡಿಸಿದ್ದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಚುನಾವಣೆಯಲ್ಲಿ ಒಂದೊಂದು ಮತವೂ ಅತ್ಯಮೂಲ್ಯ. ಒಂದು ಮತದಿಂದ ಗೆಲುವು- ಸೋಲು ಕಂಡಿರುವ ಉದಾಹರಣೆಗಳಿವೆ. ಸಂವಿಧಾನ ದತ್ತವಾಗಿ ಸಿಕ್ಕಿರುವ ಮತದಾನ ಹಕ್ಕನ್ನು ಅರಿತುಕೊಂಡು ಗುರುತರ ಜವಾಬ್ದಾರಿಯಿಂದ ಒಳ್ಳೆಯ ಅಭ್ಯರ್ಥಿಗಳಿಗೆ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಪ್ರಜಾಪ್ರಭುತ್ವ ಹೆಮ್ಮರವಾಗಿ ಬೆಳೆಯಲು ಮತದಾರರು ಮತ ಎಂಬ ನೀರು ಹಾಕಬೇಕು.ಯುವ ಜನಾಂಗ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಾವು ಗೆಲ್ಲಿಸುವ ಅಭ್ಯರ್ಥಿ ರಾಷ್ಟ್ರೀಯಮಟ್ಟದಲ್ಲಿ ಪ್ರತಿನಿಧಿಸುತ್ತಾರೆ ಎಂಬ ಅರಿವಿರಲಿ. ನೀವು ಸಹ ನಾಳೆಯ ಒಳ್ಳೆಯ ನಾಯಕರಾಗಿ ಹೊರ ಹೊಮ್ಮಬೇಕು ಎಂದು ತಿಳಿಸಿದರು.</p>.<p>ರಾಯಚೂರು ಸಹಾಯಕ ಆಯುಕ್ತ ರಜನಿಕಾಂತ್ ಮಾತನಾಡಿ, ಮತದಾನದಲ್ಲಿ ಎಲ್ಲರೂ ಭಾಗವಹಿಸುವ ಕುರಿತಂತೆ ಭಾರತ ಚುನಾವಣಾ ಆಯೋಗ ಮತದಾರರಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.</p>.<p>ರಾಷ್ಟ್ರದ ದಿಕ್ಕನ್ನು ಬದಲಿಸುವ ಶಕ್ತಿ ಮತದಾನಕ್ಕಿದೆ. ಕಾರಣ 18 ವರ್ಷ ಪೂರ್ಣಗೊಂಡ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆ ಮಾಡಿಕೊಂಡು ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸದರು.</p>.<p>1950ರ ಜನವರಿ 25ರಂದು ಭಾರತದ ಚುನಾವಣಾ ಆಯೋಗ ಸ್ಥಾಪನೆಯಾಗಿದೆ. ಹೀಗಾಗಿ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. 2011 ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಎಂದು ಘೋಷಿಸಿ ಮತದಾನಕ್ಕೊಂದು ಮುನ್ನುಡಿ ಬರೆಯಲಾಗಿದೆ ಎಂದು ವಿವರಿಸಿದರು.</p>.<p>ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ 12ನೇ ರಾಷ್ಟ್ರೀಯ ಮತದಾರರ ದಿನವಾಗಿದೆ. ಮತದಾನದ ಹಕ್ಕು ಒಬ್ಬ ಪೌರನನ್ನು ಪೂರ್ಣ ಪ್ರಮಾಣದ ಪೌರನೆಂದು ಗೌರವಿಸುತ್ತದೆ ಎಂದು ಹೇಳಿದರು.</p>.<p>ಮತದಾನ ಎಂಬುದು ಇಂದು ಕೇವಲ ಸಂವಿಧಾನಾತ್ಮಕ ಹಕ್ಕು ಅಲ್ಲ. ಬದಲಾಗಿ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಕಾನೂನು ರೂಪಿಸುವ ಸರ್ಕಾರವನ್ನು ಆಯ್ಕೆ ಮಾಡುವುದು ಎಲ್ಲ ಪೌರರ ಜವಾಬ್ದಾರಿ. ಮತದಾನದ ಒಟ್ಟು ಪ್ರಮಾಣವನ್ನು ಹೆಚ್ಚಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.</p>.<p>ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಮಹಾಜನ ಆರ್.ಎ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಕೆ.ಆರ್., ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್, ಮತದಾರರ ಸಾಕ್ಷರತಾ ಕ್ಲಬ್ನ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಡಾ.ದಂಡಪ್ಪ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಉತ್ತಮ ಜನಪ್ರತಿನಿಧಿಗಳ ಆಯ್ಕೆಗೆ ಮತದಾನದ ಹಕ್ಕು ಅವಶ್ಯಕವಾಗಿದೆ. ಪ್ರಜಾಪ್ರಭುತ್ವದ ಸುಭದ್ರತೆಗೆ 18 ವರ್ಷದತುಂಬಿದ ಎಲ್ಲರೂ ತಮ್ಮ ಮತದಾನ ಹಕ್ಕನ್ನು ಚಲಾಯಿಸುವ ಮೂಲಕ ಉತ್ತಮವಾದ ಜನಪ್ರತಿನಿಧಿಗಳನ್ನು ಆಯ್ಕೆ ಮಾಡಬೇಕು ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಮಲ್ಲಿಕಾರ್ಜುನಗೌಡ ಹೇಳಿದರು.</p>.<p>ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾಡಳಿತದಿಂದ ಮಂಗಳವಾರ ಏರ್ಪಡಿಸಿದ್ದ 12ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>ಚುನಾವಣೆಯಲ್ಲಿ ಒಂದೊಂದು ಮತವೂ ಅತ್ಯಮೂಲ್ಯ. ಒಂದು ಮತದಿಂದ ಗೆಲುವು- ಸೋಲು ಕಂಡಿರುವ ಉದಾಹರಣೆಗಳಿವೆ. ಸಂವಿಧಾನ ದತ್ತವಾಗಿ ಸಿಕ್ಕಿರುವ ಮತದಾನ ಹಕ್ಕನ್ನು ಅರಿತುಕೊಂಡು ಗುರುತರ ಜವಾಬ್ದಾರಿಯಿಂದ ಒಳ್ಳೆಯ ಅಭ್ಯರ್ಥಿಗಳಿಗೆ ಮತದಾನ ಮಾಡಬೇಕು ಎಂದು ಹೇಳಿದರು.</p>.<p>ಪ್ರಜಾಪ್ರಭುತ್ವ ಹೆಮ್ಮರವಾಗಿ ಬೆಳೆಯಲು ಮತದಾರರು ಮತ ಎಂಬ ನೀರು ಹಾಕಬೇಕು.ಯುವ ಜನಾಂಗ ಮತದಾನದ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕು. ತಾವು ಗೆಲ್ಲಿಸುವ ಅಭ್ಯರ್ಥಿ ರಾಷ್ಟ್ರೀಯಮಟ್ಟದಲ್ಲಿ ಪ್ರತಿನಿಧಿಸುತ್ತಾರೆ ಎಂಬ ಅರಿವಿರಲಿ. ನೀವು ಸಹ ನಾಳೆಯ ಒಳ್ಳೆಯ ನಾಯಕರಾಗಿ ಹೊರ ಹೊಮ್ಮಬೇಕು ಎಂದು ತಿಳಿಸಿದರು.</p>.<p>ರಾಯಚೂರು ಸಹಾಯಕ ಆಯುಕ್ತ ರಜನಿಕಾಂತ್ ಮಾತನಾಡಿ, ಮತದಾನದಲ್ಲಿ ಎಲ್ಲರೂ ಭಾಗವಹಿಸುವ ಕುರಿತಂತೆ ಭಾರತ ಚುನಾವಣಾ ಆಯೋಗ ಮತದಾರರಿಗೆ ಶಿಕ್ಷಣ ಮತ್ತು ಜಾಗೃತಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಹೇಳಿದರು.</p>.<p>ರಾಷ್ಟ್ರದ ದಿಕ್ಕನ್ನು ಬದಲಿಸುವ ಶಕ್ತಿ ಮತದಾನಕ್ಕಿದೆ. ಕಾರಣ 18 ವರ್ಷ ಪೂರ್ಣಗೊಂಡ ಎಲ್ಲರೂ ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾವಣೆ ಮಾಡಿಕೊಂಡು ಕಡ್ಡಾಯವಾಗಿ ಮತದಾನದ ಹಕ್ಕನ್ನು ಚಲಾಯಿಸಬೇಕು ಎಂದು ತಿಳಿಸದರು.</p>.<p>1950ರ ಜನವರಿ 25ರಂದು ಭಾರತದ ಚುನಾವಣಾ ಆಯೋಗ ಸ್ಥಾಪನೆಯಾಗಿದೆ. ಹೀಗಾಗಿ ಈ ದಿನವನ್ನು ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. 2011 ಜನವರಿ 25ರಂದು ರಾಷ್ಟ್ರೀಯ ಮತದಾರರ ದಿನ ಎಂದು ಘೋಷಿಸಿ ಮತದಾನಕ್ಕೊಂದು ಮುನ್ನುಡಿ ಬರೆಯಲಾಗಿದೆ ಎಂದು ವಿವರಿಸಿದರು.</p>.<p>ಪ್ರತಿವರ್ಷ ರಾಷ್ಟ್ರೀಯ ಮತದಾರರ ದಿನವನ್ನಾಗಿ ಆಚರಿಸಲಾಗುತ್ತಿದೆ. ಈ ವರ್ಷ 12ನೇ ರಾಷ್ಟ್ರೀಯ ಮತದಾರರ ದಿನವಾಗಿದೆ. ಮತದಾನದ ಹಕ್ಕು ಒಬ್ಬ ಪೌರನನ್ನು ಪೂರ್ಣ ಪ್ರಮಾಣದ ಪೌರನೆಂದು ಗೌರವಿಸುತ್ತದೆ ಎಂದು ಹೇಳಿದರು.</p>.<p>ಮತದಾನ ಎಂಬುದು ಇಂದು ಕೇವಲ ಸಂವಿಧಾನಾತ್ಮಕ ಹಕ್ಕು ಅಲ್ಲ. ಬದಲಾಗಿ ಪ್ರತಿಯೊಬ್ಬ ಪ್ರಜೆಯ ಕರ್ತವ್ಯವಾಗಿದೆ. ಕಾನೂನು ರೂಪಿಸುವ ಸರ್ಕಾರವನ್ನು ಆಯ್ಕೆ ಮಾಡುವುದು ಎಲ್ಲ ಪೌರರ ಜವಾಬ್ದಾರಿ. ಮತದಾನದ ಒಟ್ಟು ಪ್ರಮಾಣವನ್ನು ಹೆಚ್ಚಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ತಿಳಿಸಿದರು.</p>.<p>ರಾಷ್ಟ್ರೀಯ ಮತದಾರರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನಗಳನ್ನು ವಿತರಣೆ ಮಾಡಲಾಯಿತು.</p>.<p>ಹಿರಿಯ ಶ್ರೇಣಿ ದಿವಾಣಿ ನ್ಯಾಯಾಧೀಶ ಮಹಾಜನ ಆರ್.ಎ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ, ಹೆಚ್ಚುವರಿ ಜಿಲ್ಲಾಧಿಕಾರಿ ದುರುಗೇಶ್ ಕೆ.ಆರ್., ತಹಶೀಲ್ದಾರ್ ಡಾ.ಹಂಪಣ್ಣ ಸಜ್ಜನ್, ಮತದಾರರ ಸಾಕ್ಷರತಾ ಕ್ಲಬ್ನ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಡಾ.ದಂಡಪ್ಪ ಬಿರಾದಾರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>