<p><strong>ಹಟ್ಟಿ ಚಿನ್ನದ ಗಣಿ</strong> (ರಾಯಚೂರು ಜಿಲ್ಲೆ): ಸಮೀಪದ ವಂದ್ಲಿ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ ಹಾಗೂ ಶೌಚಾಲಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, 200 ಮಕ್ಕಳು ಹಾಗೂ ಶಿಕ್ಷಕರಿಗೆ ಒಂದೇ ಒಂದು ಶೌಚಾಲಯವೂ ಇಲ್ಲ!</p>.<p>1959ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಸದ್ಯ 1ರಿಂದ 7ನೇ ತರಗತಿ ವರೆಗೆ 108 ವಿದ್ಯಾರ್ಥಿನಿಯರು ಹಾಗೂ 92 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 4 ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಇದರಲ್ಲಿ ನಾಲ್ವರು ಶಿಕ್ಷಕಿಯರಿದ್ದು ಅವರಿಗೂ ಶೌಚಾಲಯದ ವ್ಯವಸ್ಥೆ ಇಲ್ಲ. ಹೀಗಾಗಿ ಮಕ್ಕಳು, ಶಿಕ್ಷಕರು ಸಹಜವಾಗಿ ನಿಸರ್ಗ ಕರೆಗೆ ಬಯಲನ್ನೇ ಅವಲಂಭಿಸಿದ್ದಾರೆ. </p>.<p>ಮಧ್ಯಾಹ್ನ ಊಟ ಮಾಡಿದ ತಟ್ಟೆ ತೊಳೆಯಲು ಮನೆಯಿಂದಲೇ ನೀರು ತರಬೇಕು. ಇಲ್ಲದಿದ್ದರೆ ಗ್ರಾಮದ ಹಳೆಯ ಬಾವಿಯ ನೀರೇ ಆಧಾರ. ಕೂಡಲು ಆಸನಗಳಿಲ್ಲ, ಮಳೆ ಬಂದರೆ ಶಾಲೆಯ ಚಾವಣಿ ಸೋರುತ್ತದೆ.</p>.<p>2021–22ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನದಲ್ಲಿ ಎರಡು ಕೊಠಡಿ ನಿರ್ಮಿಸಲಾಗಿದೆ. ಒಂದರಲ್ಲಿ 1ರಿಂದ 3 ಮತ್ತು ಇನ್ನೊಂದು ಕೋಣೆಯಲ್ಲಿ 4ರಿಂದ 6ನೇ ತರಗತಿ, ಹಳೆಯ ದಾಸ್ತಾನು ಕೊಠಡಿಯಲ್ಲಿ 7ನೇ ತರಗತಿಯ ಮಕ್ಕಳಿಗೆ ಪಾಠ ಹೇಳಲಾಗುತ್ತದೆ. ಅಲ್ಲದೆ ಇದೇ ಕೋಣೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲಾಗುತ್ತದೆ.</p>.<p>‘ವಂದ್ಲಿ ಹೊಸೂರು ಗ್ರಾಮದಲ್ಲಿ 4 ಜನ ಗ್ರಾ.ಪಂ. ಸದಸ್ಯರಿದ್ದರೂ ಶಾಲೆಗೆ ಬಂದು ಮಕ್ಕಳ ಸಮಸ್ಯೆ ಕೇಳುವುದಿಲ್ಲ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಸ್ಪಂದಿಸುತ್ತಿಲ್ಲ’ ಎನ್ನುತ್ತಾರೆ ಮಕ್ಕಳ ಪಾಲಕರು.</p>.<p>‘ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ನಡೆಸಬೇಕಾಗುತ್ತದೆ’ ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.</p>.<p> <strong>ಶಾಲೆಯ ಆವರಣದ ಸುತ್ತ ಅಸ್ವಚ್ಛತೆ ತಾಂಡವವಾಡುತ್ತಿದೆ. ವಿದ್ಯಾರ್ಥಿಗಳು ಜೀವಭಯದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಲಿ- ಶಿವರಾಜ ಗ್ರಾಮಸ್ಧ</strong></p>.<p> <strong>ನೀರಘಂಟಿಯ ಬೇಜವಾಬ್ದಾರಿಯಿಂದ ಶಾಲೆಯ ಮಕ್ಕಳಿಗೆ ಕುಡಿಯವ ನೀರಿನ ಸಮಸ್ಯೆ ಎದುರಾಗಿದೆ. ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು - ಸಿದ್ದಣ್ಣ ನಾಯಕ ವಂದ್ಲಿ ಹೊಸೂರು ಗ್ರಾ.ಪಂ. ಸದಸ್ಯ</strong></p>.<p><strong>ಕುಡಿಯುವ ನೀರು ಶೌಚಾಲಯ ಹಾಗೂ ಇತರೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಪತ್ರ ಸಲ್ಲಿಸಿದರು ಗ್ರಾ.ಪಂ ಆಡಳಿತ ಸ್ಫಂದಿಸುತ್ತಿಲ್ಲ- ವಿಜಯಕುಮಾರ ಮುಖ್ಯ ಶಿಕ್ಷಕ ವಂದ್ಲಿ ಹೊಸೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong> (ರಾಯಚೂರು ಜಿಲ್ಲೆ): ಸಮೀಪದ ವಂದ್ಲಿ ಹೊಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕೊಠಡಿ ಹಾಗೂ ಶೌಚಾಲಯಗಳಿಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದು, 200 ಮಕ್ಕಳು ಹಾಗೂ ಶಿಕ್ಷಕರಿಗೆ ಒಂದೇ ಒಂದು ಶೌಚಾಲಯವೂ ಇಲ್ಲ!</p>.<p>1959ರಲ್ಲಿ ಆರಂಭವಾದ ಈ ಶಾಲೆಯಲ್ಲಿ ಸದ್ಯ 1ರಿಂದ 7ನೇ ತರಗತಿ ವರೆಗೆ 108 ವಿದ್ಯಾರ್ಥಿನಿಯರು ಹಾಗೂ 92 ವಿದ್ಯಾರ್ಥಿಗಳು ಅಧ್ಯಯನ ಮಾಡುತ್ತಿದ್ದಾರೆ. 4 ಶಿಕ್ಷಕರು, ಇಬ್ಬರು ಅತಿಥಿ ಶಿಕ್ಷಕರಿದ್ದಾರೆ. ಇದರಲ್ಲಿ ನಾಲ್ವರು ಶಿಕ್ಷಕಿಯರಿದ್ದು ಅವರಿಗೂ ಶೌಚಾಲಯದ ವ್ಯವಸ್ಥೆ ಇಲ್ಲ. ಹೀಗಾಗಿ ಮಕ್ಕಳು, ಶಿಕ್ಷಕರು ಸಹಜವಾಗಿ ನಿಸರ್ಗ ಕರೆಗೆ ಬಯಲನ್ನೇ ಅವಲಂಭಿಸಿದ್ದಾರೆ. </p>.<p>ಮಧ್ಯಾಹ್ನ ಊಟ ಮಾಡಿದ ತಟ್ಟೆ ತೊಳೆಯಲು ಮನೆಯಿಂದಲೇ ನೀರು ತರಬೇಕು. ಇಲ್ಲದಿದ್ದರೆ ಗ್ರಾಮದ ಹಳೆಯ ಬಾವಿಯ ನೀರೇ ಆಧಾರ. ಕೂಡಲು ಆಸನಗಳಿಲ್ಲ, ಮಳೆ ಬಂದರೆ ಶಾಲೆಯ ಚಾವಣಿ ಸೋರುತ್ತದೆ.</p>.<p>2021–22ನೇ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್ಡಿಬಿ) ಅನುದಾನದಲ್ಲಿ ಎರಡು ಕೊಠಡಿ ನಿರ್ಮಿಸಲಾಗಿದೆ. ಒಂದರಲ್ಲಿ 1ರಿಂದ 3 ಮತ್ತು ಇನ್ನೊಂದು ಕೋಣೆಯಲ್ಲಿ 4ರಿಂದ 6ನೇ ತರಗತಿ, ಹಳೆಯ ದಾಸ್ತಾನು ಕೊಠಡಿಯಲ್ಲಿ 7ನೇ ತರಗತಿಯ ಮಕ್ಕಳಿಗೆ ಪಾಠ ಹೇಳಲಾಗುತ್ತದೆ. ಅಲ್ಲದೆ ಇದೇ ಕೋಣೆಯಲ್ಲಿ ಮಧ್ಯಾಹ್ನದ ಬಿಸಿಯೂಟ ತಯಾರಿಸಲಾಗುತ್ತದೆ.</p>.<p>‘ವಂದ್ಲಿ ಹೊಸೂರು ಗ್ರಾಮದಲ್ಲಿ 4 ಜನ ಗ್ರಾ.ಪಂ. ಸದಸ್ಯರಿದ್ದರೂ ಶಾಲೆಗೆ ಬಂದು ಮಕ್ಕಳ ಸಮಸ್ಯೆ ಕೇಳುವುದಿಲ್ಲ. ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಗ್ಗೆ ಅಧಿಕಾರಿಗಳಿಗೆ ತಿಳಿಸಿದರೂ ಸ್ಪಂದಿಸುತ್ತಿಲ್ಲ’ ಎನ್ನುತ್ತಾರೆ ಮಕ್ಕಳ ಪಾಲಕರು.</p>.<p>‘ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಗೆ, ಶಿಕ್ಷಕರಿಗೆ ಶೌಚಾಲಯ, ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ನಿರ್ಲಕ್ಷ್ಯ ಮಾಡಿದರೆ ಹೋರಾಟ ನಡೆಸಬೇಕಾಗುತ್ತದೆ’ ವಿದ್ಯಾರ್ಥಿ ಸಂಘಟನೆ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.</p>.<p> <strong>ಶಾಲೆಯ ಆವರಣದ ಸುತ್ತ ಅಸ್ವಚ್ಛತೆ ತಾಂಡವವಾಡುತ್ತಿದೆ. ವಿದ್ಯಾರ್ಥಿಗಳು ಜೀವಭಯದಲ್ಲಿ ಅಭ್ಯಾಸ ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಕನಿಷ್ಠ ಸೌಲಭ್ಯಗಳನ್ನಾದರೂ ನೀಡಲಿ- ಶಿವರಾಜ ಗ್ರಾಮಸ್ಧ</strong></p>.<p> <strong>ನೀರಘಂಟಿಯ ಬೇಜವಾಬ್ದಾರಿಯಿಂದ ಶಾಲೆಯ ಮಕ್ಕಳಿಗೆ ಕುಡಿಯವ ನೀರಿನ ಸಮಸ್ಯೆ ಎದುರಾಗಿದೆ. ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು - ಸಿದ್ದಣ್ಣ ನಾಯಕ ವಂದ್ಲಿ ಹೊಸೂರು ಗ್ರಾ.ಪಂ. ಸದಸ್ಯ</strong></p>.<p><strong>ಕುಡಿಯುವ ನೀರು ಶೌಚಾಲಯ ಹಾಗೂ ಇತರೆ ಸಮಸ್ಯೆ ಬಗೆಹರಿಸಿ ಎಂದು ಮನವಿ ಪತ್ರ ಸಲ್ಲಿಸಿದರು ಗ್ರಾ.ಪಂ ಆಡಳಿತ ಸ್ಫಂದಿಸುತ್ತಿಲ್ಲ- ವಿಜಯಕುಮಾರ ಮುಖ್ಯ ಶಿಕ್ಷಕ ವಂದ್ಲಿ ಹೊಸೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>