<p><strong>ಹಟ್ಟಿ ಚಿನ್ನದ ಗಣಿ</strong>: ‘ನಾಲೆಗೆ ನೀರು ಬಿಡದಿದ್ದರೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಗುರುಗುಂಟಾ ಸಂಸ್ಧಾನದ ರಾಜ ಸೋಮನಾಥ ನಾಯಕ ಹೇಳಿದರು.</p>.<p>ಗುರುಗುಂಟಾ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತ ನೀರಾವರಿ ಕಾಲುವೆಗಳಿಗೆ ವಾರಬಂಧಿಯಂತೆ ನೀರು ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಏಪ್ರಿಲ್ 1ರಿಂದ ಏಪ್ರಿಲ್ 10ರವರೆಗೆ ಮತ್ತು ಏಪ್ರಿಲ್ 15ರಿಂದ ಏಪ್ರಿಲ್ 20ರ ವರೆಗೆ ನೀರು ಹರಿಸಲು ಮನವಿ ಮಾಡಲಾಗಿತ್ತು. ಆದರೆ, ಅಧಿಕಾರಿಗಳು ರೈತರಿಗೆ ಸ್ಪಂದಿಸುತ್ತಿಲ್ಲ. ಇದು ಹೀಗೆಯೆ ಮುಂದುವರಿದರೆ ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ’ ಎಂದರು.</p>.<p>‘ಮೇಲಧಿಕಾರಿಗಳು ಇತ್ತ ಕಡೆ ಗಮನಹರಿಸಿ ನಾಲೆಗೆ ನೀರು ಹರಿಸಬೇಕು. ನಿರ್ಲಕ್ಷ್ಯ ಮಾಡಿದರೆ, ರಾಜ್ಯ ಹೆದ್ದಾರಿ 150(ಎ) ಸಂಪೂರ್ಣ ರಸ್ತೆ ಬಂದ್ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಈ ವೇಳೆ, ವಾಲ್ಮೀಕಿ ನಾಯಕ ಸಂಘದ ಮಾಜಿ ಅಧ್ಯಕ್ಷ ನಂದೀಶ ನಾಯಕ, ಚನ್ನಯ್ಯ ಸ್ವಾಮಿ, ವಿಜಯಕುಮಾರ ನಾಯಕ, ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಗೌಡೂರು ಹಾಗೂ ಪದಾಧಿಕಾರಿಗಳು, ಗ್ರಾಮಸ್ಧರು ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಟ್ಟಿ ಚಿನ್ನದ ಗಣಿ</strong>: ‘ನಾಲೆಗೆ ನೀರು ಬಿಡದಿದ್ದರೆ ರಾಜ್ಯ ಹೆದ್ದಾರಿ ಬಂದ್ ಮಾಡಿ ಉಗ್ರ ಹೋರಾಟ ಮಾಡಬೇಕಾಗುತ್ತದೆ’ ಎಂದು ಗುರುಗುಂಟಾ ಸಂಸ್ಧಾನದ ರಾಜ ಸೋಮನಾಥ ನಾಯಕ ಹೇಳಿದರು.</p>.<p>ಗುರುಗುಂಟಾ ಗ್ರಾಮದಲ್ಲಿ ರಾಜ್ಯ ರೈತ ಸಂಘ ಹಸಿರು ಸೇನೆಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.</p>.<p>‘ನಾರಾಯಣಪುರ ಬಲದಂಡೆ ಹಾಗೂ ರಾಂಪೂರ ಏತ ನೀರಾವರಿ ಕಾಲುವೆಗಳಿಗೆ ವಾರಬಂಧಿಯಂತೆ ನೀರು ಹರಿಸಬೇಕು’ ಎಂದು ಒತ್ತಾಯಿಸಿದರು.</p>.<p>‘ಏಪ್ರಿಲ್ 1ರಿಂದ ಏಪ್ರಿಲ್ 10ರವರೆಗೆ ಮತ್ತು ಏಪ್ರಿಲ್ 15ರಿಂದ ಏಪ್ರಿಲ್ 20ರ ವರೆಗೆ ನೀರು ಹರಿಸಲು ಮನವಿ ಮಾಡಲಾಗಿತ್ತು. ಆದರೆ, ಅಧಿಕಾರಿಗಳು ರೈತರಿಗೆ ಸ್ಪಂದಿಸುತ್ತಿಲ್ಲ. ಇದು ಹೀಗೆಯೆ ಮುಂದುವರಿದರೆ ಮುಂದಾಗುವ ಅನಾಹುತಗಳಿಗೆ ಅಧಿಕಾರಿಗಳೇ ಹೊಣೆ’ ಎಂದರು.</p>.<p>‘ಮೇಲಧಿಕಾರಿಗಳು ಇತ್ತ ಕಡೆ ಗಮನಹರಿಸಿ ನಾಲೆಗೆ ನೀರು ಹರಿಸಬೇಕು. ನಿರ್ಲಕ್ಷ್ಯ ಮಾಡಿದರೆ, ರಾಜ್ಯ ಹೆದ್ದಾರಿ 150(ಎ) ಸಂಪೂರ್ಣ ರಸ್ತೆ ಬಂದ್ ಮಾಡಬೇಕಾಗುತ್ತದೆ’ ಎಂದು ಎಚ್ಚರಿಸಿದರು.</p>.<p>ಈ ವೇಳೆ, ವಾಲ್ಮೀಕಿ ನಾಯಕ ಸಂಘದ ಮಾಜಿ ಅಧ್ಯಕ್ಷ ನಂದೀಶ ನಾಯಕ, ಚನ್ನಯ್ಯ ಸ್ವಾಮಿ, ವಿಜಯಕುಮಾರ ನಾಯಕ, ರೈತ ಸಂಘದ ತಾಲ್ಲೂಕು ಪ್ರಧಾನ ಕಾರ್ಯದರ್ಶಿ ಬಸವರಾಜ ಗೌಡೂರು ಹಾಗೂ ಪದಾಧಿಕಾರಿಗಳು, ಗ್ರಾಮಸ್ಧರು ಉಪಸ್ಧಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>