ಹೊಲ ಮನೆಗೆ ಹೋಗುವ ರಸ್ತೆ ಸಂಪೂರ್ಣ ಹಾಳಾಗಿದೆ. ಕೃಷಿ ಚಟುವಟಿಕೆಗೆ ಹೋಗಲು ಸಾಧ್ಯವಾ ಗುತ್ತಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಅವೈಜ್ಞಾನಿಕ ನಾಲೆ ನಿರ್ಮಾಣ ಮತ್ತು ನಿರ್ವಹಣೆ ಸಮಸ್ಯೆಯಿಂದ ಪ್ರತಿ ವರ್ಷ ನಾಲೆಗೆ ನೀರು ಹರಿಯದೆ ಜಮೀನು ರಸ್ತೆಗೆ ವ್ಯರ್ಥ ನೀರು ಪೋಲಾಗುತ್ತಿದೆ. ಅಧಿಕಾರಿಗಳ ಗಮನಕ್ಕೆ ತಂದಿದ್ದರು ಸ್ಪಂದಿಸುತ್ತಿಲ್ಲ. ಕೂಡಲೆ ಅಧಿಕಾರಿಗಳು ಇದನ್ನು ಸರಿಪಡಿಸಲು ಮುಂದಾಗಬೇಕು’ ಎಂದು ರೈತ ರುದ್ರಯ್ಯಸ್ವಾಮಿ ಒತ್ತಾಯಿಸಿದ್ದಾರೆ.