ಬುಧವಾರ ಹೇಳಿಕೆ ನೀಡಿರುವ ಅವರು,‘ಕಟ್ಟಡ ನಿರ್ಮಾಣ ಕೆಲಸಗಳಿಗೆ ನೀರನ್ನು ಬಳಸಿದ ಪ್ರಕರಣಗಳು ಕಂಡುಬಂದಲ್ಲಿ ಅಂಥ ಕಟ್ಟಡಗಳ ಮಾಲೀಕರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು. ಸಾರ್ವಜನಿಕರು ಕುಡಿಯುವ ನೀರನ್ನು ಮಿತವಾಗಿ ಬಳಸಬೇಕು. ಆರೋಗ್ಯದ ದೃಷ್ಟಿಯಿಂದ ನಗರಸಭೆಯಿಂದ ಸರಬರಾಜು ಮಾಡುವ ನೀರನ್ನು ಕಾಯಿಸಿ, ಆರಿಸಿ ಹಾಗೂ ಸೋಸಿ ಕುಡಿಯಬೇಕು’ ಎಂದು ಮನವಿ ಮಾಡಿದ್ದಾರೆ.