ತಾಲ್ಲೂಕು ಆರೋಗ್ಯಾಧಿಕಾರಿ ಡಾ. ರುದ್ರಗೌಡ ಪಾಟೀಲ್ ಮಾತನಾಡಿ, ‘ಅಂಗನವಾಡಿ, ಆಶಾ ಕಾರ್ಯಕರ್ತೆಯರು ಗ್ರಾಮೀಣ ಪ್ರದೇಶದಲ್ಲಿ ಗುಳೆ ಹೋಗಿ ಬಂದವರ ಮಾಹಿತಿ ಸಂಗ್ರಹಿಸಿದ್ದಾರೆ. ಅಧಿಕಾರಿಗಳು ಕೂಡ ಮಾಹಿತಿ ಸಂಗ್ರಹಿಸುವ ಜೊತೆಗೆ ಅಂಗಡಿ ಮುಗ್ಗಟ್ಟು ಬಂದ್ ಮಾಡಿಸಿ, ಕಟ್ಟೆಗಳ ಮೇಲೆ, ರಸ್ತೆಗೆ ಜನತೆ ಇಳಿಯದಂತೆ ಕ್ರಮ ಕೈಗೊಳ್ಳಬೇಕು’ ಎಂದು ಸೂಚಿಸಿದರು.