<p><strong>ಶಕ್ತಿನಗರ</strong>: ಮಳೆ ನೀರಿನ ರಭಸಕ್ಕೆ ಸಗಮಕುಂಟ ಮತ್ತು ಯರಗುಂಟ ಗ್ರಾಮಗಳಲ್ಲಿ ಕೊನೆ ಭಾಗದ ನಾರಾಯಣಪುರ ಬಲದಂಡೆ ಕಾಲುವೆ (ಎನ್ಆರ್ಬಿಸಿ) ಒಡೆದು ಅಪಾರ ಪ್ರಮಾಣದ ಬೆಳೆ ಜಲಾವೃತವಾಗಿದೆ.</p>.<p>ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಕೊನೆ ಭಾಗದಲ್ಲಿ ₹29 ಕೋಟಿ ವೆಚ್ಚದಲ್ಲಿ 18.6 ಕಿಲೋ ಮೀಟರ್ವರೆಗೆ ವಿಸ್ತರಣಾ ಕಾಲುವೆ ಕಾಮಗಾರಿ ಕೈಗೊಳ್ಳಲಾಗಿತ್ತು.</p>.<p>ಮಳೆ ಕಾರಣ ಹೆಚ್ಚಿನ ನೀರು ಹರಿದು ಬಂದ ಪರಿಣಾಮ ಕಾಲುವೆ ಒಡೆದು ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಮೆಣಿಸಿನಕಾಯಿ, ಹತ್ತಿ, ತೊಗರಿ ಮತ್ತು ಭತ್ತ ಕೊಚ್ಚಿ ಹೋಗಿದೆ.</p>.<p>‘ಈಚೆಗೆ ಕಾಲುವೆ ಕಾಮಗಾರಿ ನಡೆದಿತ್ತು. ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದ ಕಾರಣ ಕಾಲುವೆ ಒಡೆದು ಹೋಗಿದೆ. ₹20 ಲಕ್ಷ ಮೌಲ್ಯದ ಬೆಳೆ ನಷ್ಟ ಆಗಿದೆ’ ಎಂದು ರೈತರಾದ ಶ್ರೀಕಾಂತ, ರಂಗಾರೆಡ್ಡಿ ಅವರು ತಿಳಿಸಿದರು.</p>.<p>ಭೂಸ್ವಾಧೀನ ಪರಿಹಾರ ನೀಡುವವರೆಗೂ ಸಗಮಕುಂಟ ಗ್ರಾಮದ ರೈತರ ಜಮೀನುಗಳಲ್ಲಿ ಎನ್ಆರ್ಬಿಸಿ ಕಾಮಗಾರಿ ಮಾಡದಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈಗ ಅರ್ಧ ಕಾಮಗಾರಿ ಮುಗಿಸಿದ ಪರಿಣಾಮ, ಕಾಲುವೆ ಒಡೆದು ಜಮೀನುಗಳಲ್ಲಿ ನೀರು ನುಗ್ಗಿ ಬೆಳೆಗಳು ಹಾನಿಯಾಗಿವೆ.</p>.<p>ಅತ್ತ ಭೂಸ್ವಾಧೀನ ಪರಿಹಾರ ಇಲ್ಲ. ಇತ್ತ ಬೆಳೆ ಹಾನಿ ಪರಿಹಾರವೂ ಇಲ್ಲದಂತಾಗಿದೆ. ಕೋವಿಡ್ ನಡುವೆಯೂ ಇಂಥ ಸಮಸ್ಯೆಗಳ ಮಧ್ಯೆ ಬದುಕಬೇಕಾಗಿದೆ. ಈ ಭಾಗದ ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನಹರಿಸುತ್ತಿಲ್ಲ ಎಂದು ಸಗಮಕುಂಟ ರೈತ ಸುರೇಶ ಬಡಿಗೇರ ಅಳಲು ತೋಡಿಕೊಂಡರು.</p>.<p>ದೇವಸೂಗೂರು ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಶಿವಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಒಡೆದ ಕಾಲುವೆಯನ್ನು ಪರಿಶೀಲಿಸಿದರು.</p>.<p>ಮಳೆ ನೀರಿನ ರಭಸಕ್ಕೆ ಕಾಲುವೆ ಒಡೆದು ನೀರು ಪೋಲಾಗಿದೆ. ಒಡೆದ ಕಾಲುವೆಯನ್ನು ದುರಸ್ತಿಗೊಳಿಸುವಂತೆ, ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಬೆಳೆ ನಷ್ಟದ ಕುರಿತು ಇನ್ನೆರಡು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಕ್ತಿನಗರ</strong>: ಮಳೆ ನೀರಿನ ರಭಸಕ್ಕೆ ಸಗಮಕುಂಟ ಮತ್ತು ಯರಗುಂಟ ಗ್ರಾಮಗಳಲ್ಲಿ ಕೊನೆ ಭಾಗದ ನಾರಾಯಣಪುರ ಬಲದಂಡೆ ಕಾಲುವೆ (ಎನ್ಆರ್ಬಿಸಿ) ಒಡೆದು ಅಪಾರ ಪ್ರಮಾಣದ ಬೆಳೆ ಜಲಾವೃತವಾಗಿದೆ.</p>.<p>ಕೃಷ್ಣಾ ಭಾಗ್ಯ ಜಲ ನಿಗಮದ ವತಿಯಿಂದ ಕೊನೆ ಭಾಗದಲ್ಲಿ ₹29 ಕೋಟಿ ವೆಚ್ಚದಲ್ಲಿ 18.6 ಕಿಲೋ ಮೀಟರ್ವರೆಗೆ ವಿಸ್ತರಣಾ ಕಾಲುವೆ ಕಾಮಗಾರಿ ಕೈಗೊಳ್ಳಲಾಗಿತ್ತು.</p>.<p>ಮಳೆ ಕಾರಣ ಹೆಚ್ಚಿನ ನೀರು ಹರಿದು ಬಂದ ಪರಿಣಾಮ ಕಾಲುವೆ ಒಡೆದು ಅಕ್ಕಪಕ್ಕದ ಜಮೀನುಗಳಿಗೆ ನೀರು ನುಗ್ಗಿ ಮೆಣಿಸಿನಕಾಯಿ, ಹತ್ತಿ, ತೊಗರಿ ಮತ್ತು ಭತ್ತ ಕೊಚ್ಚಿ ಹೋಗಿದೆ.</p>.<p>‘ಈಚೆಗೆ ಕಾಲುವೆ ಕಾಮಗಾರಿ ನಡೆದಿತ್ತು. ಅವೈಜ್ಞಾನಿಕ ಹಾಗೂ ಕಳಪೆ ಗುಣಮಟ್ಟದ ಕಾರಣ ಕಾಲುವೆ ಒಡೆದು ಹೋಗಿದೆ. ₹20 ಲಕ್ಷ ಮೌಲ್ಯದ ಬೆಳೆ ನಷ್ಟ ಆಗಿದೆ’ ಎಂದು ರೈತರಾದ ಶ್ರೀಕಾಂತ, ರಂಗಾರೆಡ್ಡಿ ಅವರು ತಿಳಿಸಿದರು.</p>.<p>ಭೂಸ್ವಾಧೀನ ಪರಿಹಾರ ನೀಡುವವರೆಗೂ ಸಗಮಕುಂಟ ಗ್ರಾಮದ ರೈತರ ಜಮೀನುಗಳಲ್ಲಿ ಎನ್ಆರ್ಬಿಸಿ ಕಾಮಗಾರಿ ಮಾಡದಂತೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿತ್ತು. ಈಗ ಅರ್ಧ ಕಾಮಗಾರಿ ಮುಗಿಸಿದ ಪರಿಣಾಮ, ಕಾಲುವೆ ಒಡೆದು ಜಮೀನುಗಳಲ್ಲಿ ನೀರು ನುಗ್ಗಿ ಬೆಳೆಗಳು ಹಾನಿಯಾಗಿವೆ.</p>.<p>ಅತ್ತ ಭೂಸ್ವಾಧೀನ ಪರಿಹಾರ ಇಲ್ಲ. ಇತ್ತ ಬೆಳೆ ಹಾನಿ ಪರಿಹಾರವೂ ಇಲ್ಲದಂತಾಗಿದೆ. ಕೋವಿಡ್ ನಡುವೆಯೂ ಇಂಥ ಸಮಸ್ಯೆಗಳ ಮಧ್ಯೆ ಬದುಕಬೇಕಾಗಿದೆ. ಈ ಭಾಗದ ಜನಪ್ರತಿನಿಧಿಗಳಾಗಲಿ ಅಥವಾ ಜಿಲ್ಲಾಡಳಿತವಾಗಲಿ ಗಮನಹರಿಸುತ್ತಿಲ್ಲ ಎಂದು ಸಗಮಕುಂಟ ರೈತ ಸುರೇಶ ಬಡಿಗೇರ ಅಳಲು ತೋಡಿಕೊಂಡರು.</p>.<p>ದೇವಸೂಗೂರು ಹೋಬಳಿ ನಾಡ ಕಚೇರಿ ಉಪ ತಹಶೀಲ್ದಾರ್ ಶಿವಕುಮಾರ ಅವರು ಸ್ಥಳಕ್ಕೆ ಭೇಟಿ ನೀಡಿ ಒಡೆದ ಕಾಲುವೆಯನ್ನು ಪರಿಶೀಲಿಸಿದರು.</p>.<p>ಮಳೆ ನೀರಿನ ರಭಸಕ್ಕೆ ಕಾಲುವೆ ಒಡೆದು ನೀರು ಪೋಲಾಗಿದೆ. ಒಡೆದ ಕಾಲುವೆಯನ್ನು ದುರಸ್ತಿಗೊಳಿಸುವಂತೆ, ಅದಕ್ಕೆ ಸಂಬಂಧಿಸಿದ ಅಧಿಕಾರಿಗಳಿಗೆ ಮತ್ತು ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಬೆಳೆ ನಷ್ಟದ ಕುರಿತು ಇನ್ನೆರಡು ದಿನಗಳಲ್ಲಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ಅವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>