ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆಗೆ ನೀರು, ಆತಂಕ ಬೇಡ: ಕೆ.ಶಿವನಗೌಡ ನಾಯಕ

Last Updated 25 ಜನವರಿ 2022, 4:58 IST
ಅಕ್ಷರ ಗಾತ್ರ

ದೇವದುರ್ಗ: ‘ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ಜಿಲ್ಲೆಯ ರೈತರು ಆತಂಕಕ್ಕೆ ಒಳಗಾಗುವುದು ಬೇಡ. ಜಮೀನುಗಳಿಗೆ ನೀರು ಕೊಡಿಸುವ ಜವಾಬ್ದಾರಿ ನನ್ನದು’ ಎಂದು ಶಾಸಕ ಕೆ.ಶಿವನಗೌಡ ನಾಯಕ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ರುವ ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ರೈತರು, ಜಮೀನುಗಳಿಗೆ ಸಮರ್ಪಕವಾಗಿ ನೀರು ಲಭ್ಯವಾಗುವುದಿಲ್ಲ ಎಂದು ಗೊಂದಲದಲ್ಲಿದ್ದಾರೆ. ಗೊಂದಲಗಳಿಗೆ ಕಿವಿಗೊಡಬೇಡಿ, ತಮ್ಮ ಜಮೀನುಗಳಿಗೆ ಹೆಚ್ಚು ನೀರು ಹರಿಸುವ ಜವಾಬ್ದಾರಿ ನನ್ನದು. ಈಗಾಗಲೇ ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕಿಂತ 8-10 ದಿನಗಳ ಕಾಲ ಹೆಚ್ಚಿನ ಅವಧಿಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಬಿಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT