ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,‘ಜಿಲ್ಲೆಯಲ್ಲಿ ರುವ ನಾರಾಯಣಪುರ ಬಲದಂಡೆ ಕಾಲುವೆ ವ್ಯಾಪ್ತಿಯ ರೈತರು, ಜಮೀನುಗಳಿಗೆ ಸಮರ್ಪಕವಾಗಿ ನೀರು ಲಭ್ಯವಾಗುವುದಿಲ್ಲ ಎಂದು ಗೊಂದಲದಲ್ಲಿದ್ದಾರೆ. ಗೊಂದಲಗಳಿಗೆ ಕಿವಿಗೊಡಬೇಡಿ, ತಮ್ಮ ಜಮೀನುಗಳಿಗೆ ಹೆಚ್ಚು ನೀರು ಹರಿಸುವ ಜವಾಬ್ದಾರಿ ನನ್ನದು. ಈಗಾಗಲೇ ಸರ್ಕಾರ ಕೈಗೊಂಡಿರುವ ತೀರ್ಮಾನಕ್ಕಿಂತ 8-10 ದಿನಗಳ ಕಾಲ ಹೆಚ್ಚಿನ ಅವಧಿಗೆ ಹಿಂಗಾರು ಹಂಗಾಮಿನ ಬೆಳೆಗಳಿಗೆ ನೀರು ಬಿಡಲಾಗುವುದು ಎಂದು ಇಲಾಖೆಯ ಅಧಿಕಾರಿಗಳು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.