<p>ಸಿಂಧನೂರು: ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಉಚಿತ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಆನಂದ ಡಿ.ಹೇರೂರು ತಿಳಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ವೈದ್ಯರ ಪಾರಂಪರಿಕ ವೈದ್ಯ ಪದ್ಧತಿ ಜ್ಞಾನ ಅಪಾರವಾದದ್ದು. ಅವರಲ್ಲಿರುವ ಜ್ಞಾನ ಮುಂದಿನ ಪರಂಪರೆಗೆ ಅವರವರ ತಲೆಮಾರುಗಳಿಗೆ ಉಳಿಸಿ, ಬೆಳೆಸಿ ಮುಂದುವರಿಸಬೇಕಾಗಿದೆ ಎಂದರು.</p>.<p>ಪ್ರಸ್ತುತ ದಿನಮಾನಗಳಲ್ಲಿ ಕಲುಷಿತ ಕಲಬೆರಕೆ ಆಹಾರ ಸೇವನೆಯಿಂದ ಬರುವ ರೋಗಗಳಿಗೆ ಯಾವುದೇ ಅಡ್ಡ ಪರಿಣಾಮ ಇಲ್ಲದೆ ಪಾರಂಪರಿಕ ವೈದ್ಯರು ಅತ್ಯದ್ಭುತ ಚಿಕಿತ್ಸೆ ನೀಡುತ್ತಿದ್ದಾರೆ. ಹಳ್ಳಿಗಳಲ್ಲಿ ಈ ನಿಟ್ಟಿನಲ್ಲಿ ಪಾರಂಪರಿಕ ವೈದ್ಯರುಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಪಾರಂಪರಿಕ ವೈದ್ಯರನ್ನು ಗುರುತಿಸಿ ಅಲ್ಲಿನ ಸರ್ಕಾರ ಸೌಲಭ್ಯಗಳನ್ನು ನೀಡುತ್ತಿದೆ. ಅದೇ ರೀತಿಯಲ್ಲಿ ರಾಜ್ಯದ ವೈದ್ಯರಿಗೂ ಸೌಲಭ್ಯ ಕಲ್ಪಿಸಿ ಪ್ರೋತ್ಸಾಹಿಸುವ ಕಾರ್ಯ ಮಾಡಬೇಕೆಂದು ಆಗ್ರಹಿಸಿದರು.</p>.<p>ಈಗಾಗಲೇ ರಾಜ್ಯದ ಏಳು ಜಿಲ್ಲೆಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರುಗಳ ಆಯ್ಕೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯರನ್ನು ಗುರುತಿಸಿ ಅವರಿಗೆ ಉಚಿತ ಸದಸ್ಯತ್ವ ನೀಡಿ ಸಂಘಟಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ಮುಂದಿನ ದಿನಗಳಲ್ಲಿ ವೈದ್ಯರಿಗೆ ವಿಶೇಷ ತರಬೇತಿ ನೀಡುವುದು, ನುರಿತ ಆಯುರ್ವೇದ ವೈದ್ಯರಿಂದ ಹೆಚ್ಚೆಚ್ಚು ಕಲಿಯುವ ಆಸಕ್ತಿಯುಳ್ಳ ವೈದ್ಯರಿಗೆ ತರಬೇತಿಗಳನ್ನು ಹಮ್ಮಿಕೊಳ್ಳುವುದು ಷರಿಷತ್ ಉದ್ದೇಶವಾಗಿದೆ.</p>.<p>ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಸಿಂಧನೂರು ತಾಲ್ಲೂಕು ಘಟಕ ಅಧ್ಯಕ್ಷ ಮಲ್ಲನಗೌಡ ಮಲ್ಲಾಪುರ, ಉಪಾಧ್ಯಕ್ಷ ಗಂಗಾಧರ ಕನ್ನಾರಿ, ಕಾರ್ಯದರ್ಶಿ ಗುರುರಾಜ್ ಇದ್ದರು.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.9901068774, 9480561533 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿಂಧನೂರು: ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯ ಪರಿಷತ್ ವತಿಯಿಂದ ಉಚಿತ ಸದಸ್ಯತ್ವ ಅಭಿಯಾನ ಆರಂಭಿಸಲಾಗಿದೆ ಎಂದು ಪರಿಷತ್ ಅಧ್ಯಕ್ಷ ಆನಂದ ಡಿ.ಹೇರೂರು ತಿಳಿಸಿದರು.</p>.<p>ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದ ವೈದ್ಯರ ಪಾರಂಪರಿಕ ವೈದ್ಯ ಪದ್ಧತಿ ಜ್ಞಾನ ಅಪಾರವಾದದ್ದು. ಅವರಲ್ಲಿರುವ ಜ್ಞಾನ ಮುಂದಿನ ಪರಂಪರೆಗೆ ಅವರವರ ತಲೆಮಾರುಗಳಿಗೆ ಉಳಿಸಿ, ಬೆಳೆಸಿ ಮುಂದುವರಿಸಬೇಕಾಗಿದೆ ಎಂದರು.</p>.<p>ಪ್ರಸ್ತುತ ದಿನಮಾನಗಳಲ್ಲಿ ಕಲುಷಿತ ಕಲಬೆರಕೆ ಆಹಾರ ಸೇವನೆಯಿಂದ ಬರುವ ರೋಗಗಳಿಗೆ ಯಾವುದೇ ಅಡ್ಡ ಪರಿಣಾಮ ಇಲ್ಲದೆ ಪಾರಂಪರಿಕ ವೈದ್ಯರು ಅತ್ಯದ್ಭುತ ಚಿಕಿತ್ಸೆ ನೀಡುತ್ತಿದ್ದಾರೆ. ಹಳ್ಳಿಗಳಲ್ಲಿ ಈ ನಿಟ್ಟಿನಲ್ಲಿ ಪಾರಂಪರಿಕ ವೈದ್ಯರುಗಳಿಗೆ ಸರ್ಕಾರ ವಿಶೇಷ ಸೌಲಭ್ಯಗಳನ್ನು ನೀಡಲಾಗಿದೆ. ಈಗಾಗಲೇ ಬೇರೆ ರಾಜ್ಯಗಳಲ್ಲಿ ಪಾರಂಪರಿಕ ವೈದ್ಯರನ್ನು ಗುರುತಿಸಿ ಅಲ್ಲಿನ ಸರ್ಕಾರ ಸೌಲಭ್ಯಗಳನ್ನು ನೀಡುತ್ತಿದೆ. ಅದೇ ರೀತಿಯಲ್ಲಿ ರಾಜ್ಯದ ವೈದ್ಯರಿಗೂ ಸೌಲಭ್ಯ ಕಲ್ಪಿಸಿ ಪ್ರೋತ್ಸಾಹಿಸುವ ಕಾರ್ಯ ಮಾಡಬೇಕೆಂದು ಆಗ್ರಹಿಸಿದರು.</p>.<p>ಈಗಾಗಲೇ ರಾಜ್ಯದ ಏಳು ಜಿಲ್ಲೆಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಘಟಕದ ಅಧ್ಯಕ್ಷರುಗಳ ಆಯ್ಕೆ ಮಾಡುವ ಮೂಲಕ ಕಲ್ಯಾಣ ಕರ್ನಾಟಕ ಪಾರಂಪರಿಕ ವೈದ್ಯರನ್ನು ಗುರುತಿಸಿ ಅವರಿಗೆ ಉಚಿತ ಸದಸ್ಯತ್ವ ನೀಡಿ ಸಂಘಟಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.</p>.<p>ಮುಂದಿನ ದಿನಗಳಲ್ಲಿ ವೈದ್ಯರಿಗೆ ವಿಶೇಷ ತರಬೇತಿ ನೀಡುವುದು, ನುರಿತ ಆಯುರ್ವೇದ ವೈದ್ಯರಿಂದ ಹೆಚ್ಚೆಚ್ಚು ಕಲಿಯುವ ಆಸಕ್ತಿಯುಳ್ಳ ವೈದ್ಯರಿಗೆ ತರಬೇತಿಗಳನ್ನು ಹಮ್ಮಿಕೊಳ್ಳುವುದು ಷರಿಷತ್ ಉದ್ದೇಶವಾಗಿದೆ.</p>.<p>ಪ್ರಧಾನ ಕಾರ್ಯದರ್ಶಿ ಕುಮಾರಸ್ವಾಮಿ, ಸಿಂಧನೂರು ತಾಲ್ಲೂಕು ಘಟಕ ಅಧ್ಯಕ್ಷ ಮಲ್ಲನಗೌಡ ಮಲ್ಲಾಪುರ, ಉಪಾಧ್ಯಕ್ಷ ಗಂಗಾಧರ ಕನ್ನಾರಿ, ಕಾರ್ಯದರ್ಶಿ ಗುರುರಾಜ್ ಇದ್ದರು.</p>.<p>ಹೆಚ್ಚಿನ ಮಾಹಿತಿಗಾಗಿ ಮೊ.9901068774, 9480561533 ಸಂಪರ್ಕಿಸಬಹುದು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>