ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

5ಎ ಕಾಲುವೆ ಹೋರಾಟಕ್ಕೆ ಕಾಂಗ್ರೆಸ್ ಏಕೆ ಸ್ಪಂದಿಸಲಿಲ್ಲ: ವಿಜಯೇಂದ್ರ

Last Updated 6 ಏಪ್ರಿಲ್ 2021, 8:51 IST
ಅಕ್ಷರ ಗಾತ್ರ

ಮಸ್ಕಿ (ರಾಯಚೂರು): 'ಮಸ್ಕಿ ಕ್ಷೇತ್ರದಲ್ಲಿ ‌5ಎ ಕಾಲುವೆ ನಿರ್ಮಾಣ ಸಮಸ್ಯೆ ಸೇರಿದಂತೆ ಹಲವು‌ ಸಮಸ್ಯೆಗಳು ಈಗ ಉದ್ಭವವಾಗಿದ್ದಲ್ಲ. 16 ವರ್ಷಗಳಿಂದ ಸಮಸ್ಯೆಯಿದ್ದರೂ ಕಾಂಗ್ರೆಸ್ ಸರ್ಕಾರ ಏಕೆ ಸ್ಪಂದಿಸಿ ಕೆಲಸ ಮಾಡಿಲ್ಲ' ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರಶ್ನಿಸಿದರು.

ಮಂಗಳವಾರ ಮಸ್ಕಿ ಬಿಜೆಪಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.

'ಕಾಂಗ್ರೆಸ್ ನಾಯಕರು ಈಗ ಕ್ಷೇತ್ರದಲ್ಲಿ ಜನರನ್ನು ಭೇಟಿ ಮಾಡಿ ಮೊಸಳೆ ಕಣ್ಣೀರು ಸುರಿಸುತ್ತಿದ್ದಾರೆ. ಜನರು ಇದನ್ನು ನಂಬಬಾರದು. ಯಡಿಯೂರಪ್ಪ ‌ಅವರು ನೀರಾವರಿ ಮಾಡಿಕೊಡಲು ಬದ್ಧರಾಗಿದ್ದಾರೆ' ಎಂದರು.

'ಹಣ ಕೊಟ್ಟು ಚುನಾವಣೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಆರೋಪಿಸುವ ಮೂಲಕ ಈ ಕ್ಷೇತ್ರದ ಮತದಾರರಿಗೆ ಅವಮಾನ ಮಾಡುತ್ತಿದ್ದಾರೆ. ಹತಾಶೆಯಿಂದ ಕಾಂಗ್ರೆಸ್ ನಾಯಕರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ' ಎಂದು ಹೇಳಿದರು.

'ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಏನು ಮಾಡಿವೆ ಎಂಬುದನ್ನು ನೋಡಿ ಜನರು ಮತ ಕೊಡಲಿ. ಕಳೆದ ಒಂದು ವರ್ಷ ಅವಧಿಯಲ್ಲಿ ಮಸ್ಕಿ ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತಾಪಗೌಡ ಅವರು ತಂದಿರುವ ಅನುದಾನ ₹ 1,600 ಕೋಟಿ‌. ಅಭಿವೃದ್ಧಿ ನೋಡಿ ಜನರು ಮತ ಕೊಡುವ ವಿಶ್ವಾಸವಿದೆ' ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT