ರಾಯಚೂರು: ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993 ಪ್ರಕರಣ 263 ರಡಿ ಜವಾಬ್ದಾರಿಗಳನ್ನು ನಿರ್ವಹಿಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷ ಹಾಗೂ ಚುನಾಯಿತ ಸದಸ್ಯರೆಲ್ಲರೂ ವಿಫಲರಾಗಿದ್ದು, ಜಿಲ್ಲಾ ಪಂಚಾಯಿತಿಯನ್ನು ಏಕೆ ವಿಸರ್ಜಿಸಬಾರದು ಎಂದು ಕಾರಣ ಕೇಳಿ ಸರ್ಕಾರದ ಅಧೀನ ಕಾರ್ಯದರ್ಶಿ ಪಿ.ದೇವಸಹಾಯಂ ಅವರು ನೋಟಿಸ್ ಜಾರಿಗೊಳಿಸಿದ್ದಾರೆ.