ರಾಯಚೂರು: ನಗರದಲ್ಲಿ ಕಲುಷಿತ ಕುಡಿಯುವ ನೀರು ಕುಡಿದು ವಾಂತಿ-ಭೇದಿಯಾಗಿ ಮಹಿಳೆಯೊಬ್ಬರು ಮೃತಪಟ್ಟಿದ್ದು, 63ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿ ವಿವಿಧ ಆಸ್ಪತ್ರೆಗಳಿಗೆ ಮಂಗಳವಾರ ದಾಖಲಾಗಿದ್ದಾರೆ.
‘ಇಂದಿರಾನಗರದ ನಿವಾಸಿ ಮಲ್ಲಮ್ಮ ಮುದುಕಪ್ಪ (40) ನಿರ್ಜಲೀಕರಣದಿಂದ ಮೃತಪಟ್ಟಿದ್ದು, 63ಕ್ಕು ಹೆಚ್ಚು ಜನರು ನಿರ್ಜಲೀಕರಣ, ವಾಂತಿ, ಭೇದಿ ಕಾರಣಕ್ಕೆ ಆಸ್ಪತ್ರೆ ಸೇರಿದ್ದಾರೆ. ಅನಾರೋಗ್ಯಕ್ಕೆ ಒಳಗಾದವರಲ್ಲಿ 23 ಮಕ್ಕಳಿದ್ದಾರೆ’ ಎಂದು ರಿಮ್ಸ್ ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.