<p><strong>ಸಿರವಾರ</strong>: ‘ಮಹಿಳೆ ಏನು ಮಾಡಿದರೂ ಅದು ಒಳಿತು ಬಯಸುವ ದಾರಿಯಾಗಿರುತ್ತದೆ. ಪ್ರತಿಯೊಬ್ಬ ಮಹಿಳೆ ನಡೆದುಕೊಂಡು ಬಂದಿರುವ ದಾರಿ ಅವಳ ಸಂಸ್ಕಾರದ ಮೂಲಾಧಾರವಾಗಿದೆ’ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕಿ ಮಂಜುಳಾ ಸಗರದ ಹೇಳಿದರು.</p>.<p>ಪಟ್ಟಣದ ಸಜ್ಜಲಶ್ರೀ ಶರಣಮ್ಮ ತಾಯಿ ಶಾಖಾಮಠದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಭಾನುವಾರ ನಡೆದ ‘ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ’ದ ಕುರಿತ ತಾಲ್ಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಏಳಿಗೆಗೆ ಶ್ರಮಿಸುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಹಿಳೆಯರ ಸಬಲೀಕರಣ, ಎಲ್ಲಾ ರಂಗಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ’ ಎಂದರು.</p>.<p>ಯೋಜನೆಯ ಜಿಲ್ಲಾ ನಿರ್ದೇಶಕ ಮೋಹನ ನಾಯ್ಕ ಮಾತನಾಡಿ,‘ಮಹಿಳೆಯರು ತಮ್ಮ ಬದುಕನ್ನು ರೂಪಿಸಿಕೊಳ್ಳಲು ಕುಟುಂಬ ನಿರ್ವಹಣೆ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಮಾನಸಿಕವಾಗಿ ಸಬಲರಾಗಲು ಈ ಮಹಿಳಾ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p> ತಾಲ್ಲೂಕು ಯೋಜನಾಧಿಕಾರಿ ಚಂದ್ರಹಾಸ.ಬಿ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ಜ್ಯೋತಿ ಉದ್ಘಾಟಿಸಿದರು.</p>.<p>ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಅಯ್ಯನಗೌಡ ಏರಡ್ಡಿ, ಪ.ಪಂ ಅಧ್ಯಕ್ಷ ವೈ.ಭೂಪನಗೌಡ, ಜ್ಞಾನ ವಿಕಾಸ ಕೇಂದ್ರದ ಪ್ರಾದೇಶಿಕ ಯೋಜನಾಧಿಕಾರಿ ಸುಧಾ ಗಾಂವ್ಕರ್, ಎನ್.ರೇಣುಕಾ ಮಾತನಾಡಿದರು.</p>.<p>ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಜ್ಞಾನಮಿತ್ರ, ಮೇಲ್ವಿಚಾರಕಿ ವನಿತಾ, ಜ್ಞಾನ ವಿಕಾಸದ ಸಮನ್ವಯಾಧಿಕಾರಿ ಯಶೋಧಾ ಸೇರಿದಂತೆ ಯೋಜನೆಯ ಮೇಲ್ವಿಚಾರಕರು, ಸಿಬ್ಬಂದಿ ಸೇರಿದಂತೆ ಜ್ಞಾನ ವಿಕಾಸ ಕೇಂದ್ರಗಳ ಮಹಿಳಾ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿರವಾರ</strong>: ‘ಮಹಿಳೆ ಏನು ಮಾಡಿದರೂ ಅದು ಒಳಿತು ಬಯಸುವ ದಾರಿಯಾಗಿರುತ್ತದೆ. ಪ್ರತಿಯೊಬ್ಬ ಮಹಿಳೆ ನಡೆದುಕೊಂಡು ಬಂದಿರುವ ದಾರಿ ಅವಳ ಸಂಸ್ಕಾರದ ಮೂಲಾಧಾರವಾಗಿದೆ’ ಎಂದು ಸರ್ಕಾರಿ ಬಾಲಕಿಯರ ಪ್ರೌಢಶಾಲೆ ಶಿಕ್ಷಕಿ ಮಂಜುಳಾ ಸಗರದ ಹೇಳಿದರು.</p>.<p>ಪಟ್ಟಣದ ಸಜ್ಜಲಶ್ರೀ ಶರಣಮ್ಮ ತಾಯಿ ಶಾಖಾಮಠದ ಆವರಣದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್, ಜ್ಞಾನ ವಿಕಾಸ ಕೇಂದ್ರದ ವತಿಯಿಂದ ಭಾನುವಾರ ನಡೆದ ‘ಕುಟುಂಬದ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ’ದ ಕುರಿತ ತಾಲ್ಲೂಕುಮಟ್ಟದ ಮಹಿಳಾ ವಿಚಾರಗೋಷ್ಠಿಯಲ್ಲಿ ಮಾತನಾಡಿದರು.</p>.<p>‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹಿಳೆಯರ ಏಳಿಗೆಗೆ ಶ್ರಮಿಸುತ್ತಿದೆ. ಗ್ರಾಮಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಹಿಳೆಯರ ಸಬಲೀಕರಣ, ಎಲ್ಲಾ ರಂಗಗಳಲ್ಲಿ ಮಹಿಳೆಯರ ಪಾಲ್ಗೊಳ್ಳುವಿಕೆಗೆ ಪ್ರೋತ್ಸಾಹ ನೀಡುತ್ತಿರುವುದು ಅತ್ಯಂತ ಹೆಮ್ಮೆಯ ಸಂಗತಿಯಾಗಿದೆ’ ಎಂದರು.</p>.<p>ಯೋಜನೆಯ ಜಿಲ್ಲಾ ನಿರ್ದೇಶಕ ಮೋಹನ ನಾಯ್ಕ ಮಾತನಾಡಿ,‘ಮಹಿಳೆಯರು ತಮ್ಮ ಬದುಕನ್ನು ರೂಪಿಸಿಕೊಳ್ಳಲು ಕುಟುಂಬ ನಿರ್ವಹಣೆ ಜೊತೆಯಲ್ಲಿ ಸಾಮಾಜಿಕ, ಆರ್ಥಿಕ ಹಾಗೂ ಮಾನಸಿಕವಾಗಿ ಸಬಲರಾಗಲು ಈ ಮಹಿಳಾ ವಿಚಾರಗೋಷ್ಠಿಯನ್ನು ಹಮ್ಮಿಕೊಳ್ಳಲಾಗಿದೆ’ ಎಂದು ಹೇಳಿದರು.</p>.<p> ತಾಲ್ಲೂಕು ಯೋಜನಾಧಿಕಾರಿ ಚಂದ್ರಹಾಸ.ಬಿ ಪ್ರಸ್ತಾವಿಕವಾಗಿ ಮಾತನಾಡಿದರು.</p>.<p>ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಬಿ.ಕೆ.ಜ್ಯೋತಿ ಉದ್ಘಾಟಿಸಿದರು.</p>.<p>ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಅಯ್ಯನಗೌಡ ಏರಡ್ಡಿ, ಪ.ಪಂ ಅಧ್ಯಕ್ಷ ವೈ.ಭೂಪನಗೌಡ, ಜ್ಞಾನ ವಿಕಾಸ ಕೇಂದ್ರದ ಪ್ರಾದೇಶಿಕ ಯೋಜನಾಧಿಕಾರಿ ಸುಧಾ ಗಾಂವ್ಕರ್, ಎನ್.ರೇಣುಕಾ ಮಾತನಾಡಿದರು.</p>.<p>ಜಿಲ್ಲಾ ಜನಜಾಗೃತಿ ವೇದಿಕೆಯ ಸದಸ್ಯ ಜ್ಞಾನಮಿತ್ರ, ಮೇಲ್ವಿಚಾರಕಿ ವನಿತಾ, ಜ್ಞಾನ ವಿಕಾಸದ ಸಮನ್ವಯಾಧಿಕಾರಿ ಯಶೋಧಾ ಸೇರಿದಂತೆ ಯೋಜನೆಯ ಮೇಲ್ವಿಚಾರಕರು, ಸಿಬ್ಬಂದಿ ಸೇರಿದಂತೆ ಜ್ಞಾನ ವಿಕಾಸ ಕೇಂದ್ರಗಳ ಮಹಿಳಾ ಸದಸ್ಯರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>