<p><strong>ರಾಯಚೂರು</strong>: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಇಲ್ಲಿಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಸ್ಪಂದನ ಕಾರ್ಯಕ್ರಮ ಹಾಗೂ ಮಹಿಳಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು ಬಾರದ ಕಾರಣ ಕೋಲಹಲ ಉಂಟಾಯಿತು.</p><p>ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೂ ಪ್ರಮುಖ ಅಧಿಕಾರಿಗಳು ಬಾರದಿದ್ದಾಗ ಸಭೆ ಆರಂಭಿಸಿದರು. ನೊಂದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಆರಂಭಿಸಿದರೂ ಅದಕ್ಕೆ ಸ್ಪಂದಿಸುವ ಅಧಿಕಾರಿಗಳೇ ಇಲ್ಲದ ಕಾರಣ ನಾಗಲಕ್ಷ್ಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p><p>‘ನಾನು ರಾಯಚೂರಿಗೆ ಮೂರು ದಿನಗಳು ಆಗಿವೆ. ಒಬ್ಬ ಅಧಿಕಾರಿಯೂ ಫೋನ್ ಕರೆ ಮಾಡಿ ವಿಚಾರಿಸಿಲ್ಲ. ಮಧ್ಯಾಹ್ನ 1 ಗಂಟೆ ವರೆಗ ಕಾಯ್ದರೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೂ ಸಭೆಗೆ ಬಂದಿಲ್ಲ. ಆಯೋಗದ ಅಧ್ಯಕ್ಷೆಯಾದ ನನಗೇ ಸ್ಪಂದಿಸುತ್ತಿಲ್ಲ. ಇನ್ನು ನೊಂದ ಮಹಿಳೆಯರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.</p><p>‘ನಾನು ರಾಜ್ಯದ 22 ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ ಬಂದಿದ್ದೇನೆ. ಆದರೆ, ಇಷ್ಟು ಕೆಟ್ಟದಾದ ವ್ಯವಸ್ಥೆಯನ್ನು ಎಲ್ಲೂ ಕಾಣಲಿಲ್ಲ. ಆಯೋಗಕ್ಕೆ ಅಧಿಕಾರವೇ ಇಲ್ಲವೆಂದು ಅಧಿಕಾರಿಗಳು ಭಾವಿಸಿದ್ದಾರೆ. ಆಯೋಗಕ್ಕೆ ಎಷ್ಟು ಅಧಿಕಾರ ಎಷ್ಟಿದೆ ಎನ್ನುವುದನ್ನು ತೋರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p><p>ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಕ್ಕಳೊಂದಿಗೆ ಆಗಮಿಸಿ, ‘ನನಗೆ ಜನರಿಸಿರುವ ಇಬ್ಬರೂ ಮಕ್ಕಳು ಅಂಧರಿದ್ದಾರೆ. ಮಕ್ಕಳನ್ನು ಸಲಹುವುದು ಕಷ್ಟವಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿ ಹೇಗಾದರೂ ಮಾಡಿ ಬದುಕಿಕೊಳ್ಳುತ್ತೇವೆ’ ಎಂದು ಕೈಮುಗಿದು ಕೇಳಿಕೊಂಡರು. </p><p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಾತನಾಡಿ, ‘ಕಾನೂನಿನಲ್ಲಿ ಅನುಕಂಪದಲ್ಲಿ ನೇಮಕ ಮಾಡಿಕೊಳ್ಳಲು ಅವಕಾಶ ಇಲ್ಲ. ಮಹಿಳೆ ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕಗಳೂ ಕಡಿಮೆ ಇವೆ. ಹೀಗಾಗಿ ಅವರಿಗೆ ನೌಕರಿ ಕೊಡಲಾಗದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p><p>ಇನ್ನೊಬ್ಬ ಶಿಕ್ಷಕಿ ಮಾತನಾಡಿ, ‘ ಶಿಕ್ಷಣ ಇಲಾಖೆಯವರು ನನಗೆ 8 ತಿಂಗಳಿಂದ ಸಂಬಳ ಕೊಟ್ಟಿಲ್ಲ. ನಾನು ಹೇಗೆ ಜೀವನ ನಿರ್ವಹಣೆ ಮಾಡಬೇಕು. ನನಗೆ ಬಾಕಿ ಸಂಬಳ ಕೊಡಿಸಿ‘ ಎಂದು ಮನವಿ ಮಾಡಿಕೊಂಡರು.</p><p>‘ಮಹಾನಗರಪಾಲಿಕೆಗೆ ಮೂರು ವರ್ಷಗಳಿಂದ ಅಲೆದಾಡುತ್ತಿದ್ದೇನೆ. ಅಧಿಕಾರಿಗಳು ಬಿ ಖಾತಾ ಮಾಡಿಕೊಡಲು ಸಿದ್ಧರಿಲ್ಲ. ಸರ್ಕಾರಿ ಕಚೇರಿ ಅಲೆದಾಡಿ ಸಾಕಾಗಿದೆ. ಬಿಖಾತಾ ಮಾಡಿಸಿಕೊಡಿ’ ಎಂದು ಕೇಳಿಕೊಂಡರು.</p><p>ಅಧ್ಯಕ್ಷರು ಮಹಿಳೆಯರಿಂದ ಅವಹಾಲು ಸ್ವೀಕರಿಸಿದರೂ ಅದಕ್ಕೆ ಸ್ಪಂದಿಸಲು ಅಧಿಕಾರಿಗಳೇ ಸ್ಥಳದಲ್ಲಿ ಇರಲಿಲ್ಲ. ಇದರಿಂದ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಂಗ ಮಂದಿರದಲ್ಲಿ ಸೇರಿದ ಮಹಿಳೆಯರು ಹಾಗೂ ಅಂಗವಿಕಲರು ಅಧಿಕಾರಿಗಳ ವಿರದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಗಬ್ಬೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಾಗಿರುವ ನನ್ನ ಮಗನ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಶಂಕಿತರ ಹೆಸರು ಬರೆದು ದೂರು ಕೊಟ್ಟರೂ ಜಿಲ್ಲೆಯ ಪೊಲೀಸರು ಸ್ಪಂದಿಸುತ್ತಿಲ್ಲ. ಬಡ ಮಹಿಳೆಯರು ನ್ಯಾಯ ಕೇಳಲು ಎಲ್ಲಿಗೆ ಹೋಗಬೇಕು?‘ ಎಂದು ತಾಯಿಯೊಬ್ಬರು ಪ್ರಶ್ನಿಸಿದರು.</p><p>ಸುಮಾರು 400 ಮಹಿಳೆಯರು, ಅಂಗವಿಕಲರು ಆಯೋಗಕ್ಕೆ ಸಲ್ಲಿಸಲು ಮನವಿ ಹಿಡಿದುಕೊಂಡು ಬಂದರು. ಹಿರಿಯ ಅಧಿಕಾರಿಗಳು ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು</strong>: ಕರ್ನಾಟಕ ರಾಜ್ಯ ಮಹಿಳಾ ಆಯೋಗ ಇಲ್ಲಿಯ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗ ಮಂದಿರದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಸ್ಪಂದನ ಕಾರ್ಯಕ್ರಮ ಹಾಗೂ ಮಹಿಳಾ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಗೆ ಜಿಲ್ಲಾ ಮಟ್ಟದ ಪ್ರಮುಖ ಅಧಿಕಾರಿಗಳು ಬಾರದ ಕಾರಣ ಕೋಲಹಲ ಉಂಟಾಯಿತು.</p><p>ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಅವರು ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೂ ಪ್ರಮುಖ ಅಧಿಕಾರಿಗಳು ಬಾರದಿದ್ದಾಗ ಸಭೆ ಆರಂಭಿಸಿದರು. ನೊಂದ ಮಹಿಳೆಯರು ತಮ್ಮ ಸಮಸ್ಯೆಗಳನ್ನು ಹೇಳಿಕೊಳ್ಳಲು ಆರಂಭಿಸಿದರೂ ಅದಕ್ಕೆ ಸ್ಪಂದಿಸುವ ಅಧಿಕಾರಿಗಳೇ ಇಲ್ಲದ ಕಾರಣ ನಾಗಲಕ್ಷ್ಮಿ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p><p>‘ನಾನು ರಾಯಚೂರಿಗೆ ಮೂರು ದಿನಗಳು ಆಗಿವೆ. ಒಬ್ಬ ಅಧಿಕಾರಿಯೂ ಫೋನ್ ಕರೆ ಮಾಡಿ ವಿಚಾರಿಸಿಲ್ಲ. ಮಧ್ಯಾಹ್ನ 1 ಗಂಟೆ ವರೆಗ ಕಾಯ್ದರೂ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿ ಸಿಇಒ ಅವರೂ ಸಭೆಗೆ ಬಂದಿಲ್ಲ. ಆಯೋಗದ ಅಧ್ಯಕ್ಷೆಯಾದ ನನಗೇ ಸ್ಪಂದಿಸುತ್ತಿಲ್ಲ. ಇನ್ನು ನೊಂದ ಮಹಿಳೆಯರ ಸಮಸ್ಯೆಗಳಿಗೆ ಹೇಗೆ ಸ್ಪಂದಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.</p><p>‘ನಾನು ರಾಜ್ಯದ 22 ಜಿಲ್ಲೆಗಳಲ್ಲಿ ಸಭೆಗಳನ್ನು ನಡೆಸಿ ಬಂದಿದ್ದೇನೆ. ಆದರೆ, ಇಷ್ಟು ಕೆಟ್ಟದಾದ ವ್ಯವಸ್ಥೆಯನ್ನು ಎಲ್ಲೂ ಕಾಣಲಿಲ್ಲ. ಆಯೋಗಕ್ಕೆ ಅಧಿಕಾರವೇ ಇಲ್ಲವೆಂದು ಅಧಿಕಾರಿಗಳು ಭಾವಿಸಿದ್ದಾರೆ. ಆಯೋಗಕ್ಕೆ ಎಷ್ಟು ಅಧಿಕಾರ ಎಷ್ಟಿದೆ ಎನ್ನುವುದನ್ನು ತೋರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p><p>ಈ ಸಂದರ್ಭದಲ್ಲಿ ಮಹಿಳೆಯೊಬ್ಬರು ಮಕ್ಕಳೊಂದಿಗೆ ಆಗಮಿಸಿ, ‘ನನಗೆ ಜನರಿಸಿರುವ ಇಬ್ಬರೂ ಮಕ್ಕಳು ಅಂಧರಿದ್ದಾರೆ. ಮಕ್ಕಳನ್ನು ಸಲಹುವುದು ಕಷ್ಟವಾಗುತ್ತಿದೆ. ಅಂಗನವಾಡಿ ಕಾರ್ಯಕರ್ತೆಯ ನೌಕರಿ ಕೊಡಿ ಹೇಗಾದರೂ ಮಾಡಿ ಬದುಕಿಕೊಳ್ಳುತ್ತೇವೆ’ ಎಂದು ಕೈಮುಗಿದು ಕೇಳಿಕೊಂಡರು. </p><p>ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಮಾತನಾಡಿ, ‘ಕಾನೂನಿನಲ್ಲಿ ಅನುಕಂಪದಲ್ಲಿ ನೇಮಕ ಮಾಡಿಕೊಳ್ಳಲು ಅವಕಾಶ ಇಲ್ಲ. ಮಹಿಳೆ ಎಸ್ಎಸ್ಎಲ್ಸಿಯಲ್ಲಿ ಪಡೆದ ಅಂಕಗಳೂ ಕಡಿಮೆ ಇವೆ. ಹೀಗಾಗಿ ಅವರಿಗೆ ನೌಕರಿ ಕೊಡಲಾಗದು’ ಎಂದು ಅಸಹಾಯಕತೆ ವ್ಯಕ್ತಪಡಿಸಿದರು.</p><p>ಇನ್ನೊಬ್ಬ ಶಿಕ್ಷಕಿ ಮಾತನಾಡಿ, ‘ ಶಿಕ್ಷಣ ಇಲಾಖೆಯವರು ನನಗೆ 8 ತಿಂಗಳಿಂದ ಸಂಬಳ ಕೊಟ್ಟಿಲ್ಲ. ನಾನು ಹೇಗೆ ಜೀವನ ನಿರ್ವಹಣೆ ಮಾಡಬೇಕು. ನನಗೆ ಬಾಕಿ ಸಂಬಳ ಕೊಡಿಸಿ‘ ಎಂದು ಮನವಿ ಮಾಡಿಕೊಂಡರು.</p><p>‘ಮಹಾನಗರಪಾಲಿಕೆಗೆ ಮೂರು ವರ್ಷಗಳಿಂದ ಅಲೆದಾಡುತ್ತಿದ್ದೇನೆ. ಅಧಿಕಾರಿಗಳು ಬಿ ಖಾತಾ ಮಾಡಿಕೊಡಲು ಸಿದ್ಧರಿಲ್ಲ. ಸರ್ಕಾರಿ ಕಚೇರಿ ಅಲೆದಾಡಿ ಸಾಕಾಗಿದೆ. ಬಿಖಾತಾ ಮಾಡಿಸಿಕೊಡಿ’ ಎಂದು ಕೇಳಿಕೊಂಡರು.</p><p>ಅಧ್ಯಕ್ಷರು ಮಹಿಳೆಯರಿಂದ ಅವಹಾಲು ಸ್ವೀಕರಿಸಿದರೂ ಅದಕ್ಕೆ ಸ್ಪಂದಿಸಲು ಅಧಿಕಾರಿಗಳೇ ಸ್ಥಳದಲ್ಲಿ ಇರಲಿಲ್ಲ. ಇದರಿಂದ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ರಂಗ ಮಂದಿರದಲ್ಲಿ ಸೇರಿದ ಮಹಿಳೆಯರು ಹಾಗೂ ಅಂಗವಿಕಲರು ಅಧಿಕಾರಿಗಳ ವಿರದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.</p><p>‘ಗಬ್ಬೂರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ವಾಸವಾಗಿರುವ ನನ್ನ ಮಗನ ಸಂಶಯಾಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾನೆ. ಶಂಕಿತರ ಹೆಸರು ಬರೆದು ದೂರು ಕೊಟ್ಟರೂ ಜಿಲ್ಲೆಯ ಪೊಲೀಸರು ಸ್ಪಂದಿಸುತ್ತಿಲ್ಲ. ಬಡ ಮಹಿಳೆಯರು ನ್ಯಾಯ ಕೇಳಲು ಎಲ್ಲಿಗೆ ಹೋಗಬೇಕು?‘ ಎಂದು ತಾಯಿಯೊಬ್ಬರು ಪ್ರಶ್ನಿಸಿದರು.</p><p>ಸುಮಾರು 400 ಮಹಿಳೆಯರು, ಅಂಗವಿಕಲರು ಆಯೋಗಕ್ಕೆ ಸಲ್ಲಿಸಲು ಮನವಿ ಹಿಡಿದುಕೊಂಡು ಬಂದರು. ಹಿರಿಯ ಅಧಿಕಾರಿಗಳು ಸಭೆಗೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ಕಳಿಸಿಕೊಟ್ಟಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>