<p><strong>ಸಿಂಧನೂರು</strong>: ಮಹಿಳೆಯರ ಸಬಲೀಕರಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ರಾಜೇಂದ್ರ ಕುಮಾರ ಸ್ಮಾರಕ ಶಾಲೆಯ ಆಡಳಿತಾಧಿಕಾರಿ ಸರಸ್ವತಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ನಗರದ ಕುಷ್ಟಗಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜ್ಞಾನ ಸಿಂಧು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಲಿಂಗ ಸಮಾನತೆಯ ಮೂಲಕ ಸಮಾಜದಲ್ಲಿ ಮಹಿಳೆಯ ಸ್ಥಾನಮಾನ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಮಹಿಳೆಯರಿಗೆ ಆಗುವ ಅನ್ಯಾಯಗಳನ್ನು ಸರಿಪಡಿಸುವುದು ಮಹತ್ವದಾಗಿದೆ. ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡುವುದರ ಮೂಲಕ ಮಹಿಳಾ ದಿನಾಚರಣೆ ಧ್ಯೇಯ ಈಡೇರಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರೊ.ಪಿ.ಕಣ್ಣನ್ ಮಾತನಾಡಿ, ಶತಶತಮಾನಗಳಿಂದ ಮಹಿಳೆಯರಿಗೆ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಸ್ಥಾನ-ಮಾನಗಳು ದೊರೆಯುತ್ತಿಲ್ಲ. ಜಾಗತಿಕವಾಗಿ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕು’ ಎಂದು ಹೇಳಿದರು.</p>.<p>ಇಂಗ್ಲಿಷ್ ಉಪನ್ಯಾಸಕಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಯಶೋದಾ ನಿರೂಪಿಸಿದರು. ಭಾರ್ಗವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಸಿಂಧನೂರು</strong>: ಮಹಿಳೆಯರ ಸಬಲೀಕರಣದಿಂದ ಸಮಾಜದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದು ರಾಜೇಂದ್ರ ಕುಮಾರ ಸ್ಮಾರಕ ಶಾಲೆಯ ಆಡಳಿತಾಧಿಕಾರಿ ಸರಸ್ವತಿ ಪಾಟೀಲ ಅಭಿಪ್ರಾಯಪಟ್ಟರು.</p>.<p>ನಗರದ ಕುಷ್ಟಗಿ ರಸ್ತೆಯಲ್ಲಿರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಜ್ಞಾನ ಸಿಂಧು ಆವರಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಅಂತರರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.</p>.<p>ಲಿಂಗ ಸಮಾನತೆಯ ಮೂಲಕ ಸಮಾಜದಲ್ಲಿ ಮಹಿಳೆಯ ಸ್ಥಾನಮಾನ ಹಾಗೂ ಸಮಾನ ಅವಕಾಶಗಳನ್ನು ಕಲ್ಪಿಸಬೇಕು. ಮಹಿಳೆಯರಿಗೆ ಆಗುವ ಅನ್ಯಾಯಗಳನ್ನು ಸರಿಪಡಿಸುವುದು ಮಹತ್ವದಾಗಿದೆ. ಮಹಿಳೆಯರಿಗೆ ಎಲ್ಲ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡುವುದರ ಮೂಲಕ ಮಹಿಳಾ ದಿನಾಚರಣೆ ಧ್ಯೇಯ ಈಡೇರಿಸಬೇಕು ಎಂದರು.</p>.<p>ಅಧ್ಯಕ್ಷತೆ ವಹಿಸಿದ್ದ ಪ್ರೊ.ಪಿ.ಕಣ್ಣನ್ ಮಾತನಾಡಿ, ಶತಶತಮಾನಗಳಿಂದ ಮಹಿಳೆಯರಿಗೆ ಪುರುಷ ಪ್ರಧಾನ ವ್ಯವಸ್ಥೆಯಲ್ಲಿ ಸಮಾನ ಅವಕಾಶ ಸ್ಥಾನ-ಮಾನಗಳು ದೊರೆಯುತ್ತಿಲ್ಲ. ಜಾಗತಿಕವಾಗಿ ಮಹಿಳೆಯರಿಗೆ ರಾಜಕೀಯ, ಸಾಮಾಜಿಕ ಧಾರ್ಮಿಕ ಕ್ಷೇತ್ರದಲ್ಲಿ ಸಮಾನ ಅವಕಾಶಗಳನ್ನು ನೀಡಬೇಕು’ ಎಂದು ಹೇಳಿದರು.</p>.<p>ಇಂಗ್ಲಿಷ್ ಉಪನ್ಯಾಸಕಿ ಶಶಿಕಲಾ ಪ್ರಾಸ್ತಾವಿಕವಾಗಿ ಮಾತನಾಡಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಯಶೋದಾ ನಿರೂಪಿಸಿದರು. ಭಾರ್ಗವಿ ವಂದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>