'ಧರಣಿ ಇಲ್ಲಿಗೆ ಸ್ಥಗಿತ ಆಗುವುದಿಲ್ಲ. ಅಕ್ರಮ ಮದ್ಯ ಮಾರಾಟ ತಡೆಯುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂಬುದರ ಬಗ್ಗೆ ಜಿಲ್ಲಾಧಿಕಾರಿಗೆ ಕಳವಳವಿಲ್ಲ. ಬಿಸಿಲು, ಚಳಿ ಲೆಕ್ಕಿಸದೆ ಧರಣಿ ನಡೆಸುತ್ತಿರುವ ಮಹಿಳೆಯರ ಬಗ್ಗೆ ಕಾಳಜಿ ಇದ್ದಂತಿಲ್ಲ. ಕಾದು ನೋಡುತ್ತೇವೆ. ಸಿಎಂ ಭೇಟಿಗೆ ಅವಕಾಶ ಮಾಡಿಕೊಡುವವರೆಗೆ ಧರಣಿ ಮುಂದುವರಿಸಲಾಗುವುದು ' ಸಂಘಟನೆಯ ರಾಜ್ಯ ಸಂಚಾಲಕಿ ಸ್ವರ್ಣಾ ಭಟ್ 'ಪ್ರಜಾವಾಣಿ'ಗೆ ತಿಳಿಸಿದರು.