<p><strong>ರಾಯಚೂರು: </strong>ಮಹಿಳೆಯರು ಮತ್ತು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದ ಜಿಲ್ಲಾ ಘಟಕದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ.</p>.<p>ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಬಾಲಕಿಯರು ಹಾಗೂ ವಿದ್ಯಾರ್ಥಿನಿಯರು ಇರುವ ಕಡೆಗಳಲ್ಲಿ ಪುರುಷರು ಯಾವುದೇ ಕಾರಣಕ್ಕೂ ವಾರ್ಡ್ನಗಳಾಗಿ, ಕಾವಲುಗಾರರನ್ನಾಗಿ, ಅಡುಗೆ ಸಹಾಯಕರ ಹುದ್ದೆಗಳಿಗೆ ನೇಮಕ ಮಾಡಬಾರದು ಎಂದರು.</p>.<p>ಈಚೆಗೆ ಸಿಂಧನೂರು ಹಾಗೂ ರಾಯಚೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುವುದಕ್ಕೆ ನಿರ್ಲಕ್ಷ್ಯವೆ ಪ್ರಮುಖವಾಗಿದೆ. ಬಹುತೇಕ ಸರ್ಕಾರಿ ಸರ್ಕಾರೇತರ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಯುವ ಸಮಿತಿಗಳಿರುವುದಿಲ್ಲ. ಇರುವ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಅಂಥ ಸಂಸ್ಥೆಗಳ ಸಮಿತಿಗಳ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಈ ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ದೌರ್ಜನ್ಯ ಪ್ರಕರಣಗಳ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮಹಿಳೆಯರ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದ ಸಂದರ್ಭದಲ್ಲಿ ಸಂತ್ರಸ್ತರೊಂದಿಗೆ ಪೊಲೀಸ್ ಹಾಗೂ ಇತರ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿದರು.</p>.<p>ಸುಪ್ರೀಂಕೋರ್ಟ್ ಆದೇಶದಂತೆ ಇಂಥ ಪ್ರಕರಣಗಳಲ್ಲಿ ಕೂಡಲೇ ಸಂತ್ರಸ್ತರಿಗೆ ನ್ಯಾಯದೊರಕಬೇಕು. ಅನ್ಯಾಯಕ್ಕೊಳಗಾದವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು, ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚುವ ಕಾರ್ಯ ನಡೆಯಬೇಕು ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಸಂಚಾಲಕರಾದ ವಿದ್ಯಾಪಾಟೀಲ್, ವಿರುಪಮ್ಮ, ಮೋಕ್ಷಮ್ಮ, ಅಮರಮ್ಮ, ಶರೀಪಮ್ಮ, ಅಂಬಮ್ಮ, ರಂಗಮ್ಮ, ಮಾಳಮ್ಮ, ಮರಿಯಮ್ಮ, ಪ್ರಿಯಾಂಕ, ಮಮತಾ, ಸಾವಿತ್ರಮ್ಮ, ಲಕ್ಷ್ಮೀ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ಮಹಿಳೆಯರು ಮತ್ತು ಮಕ್ಕಳಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿ ರಾಜ್ಯ ಮಹಿಳಾ ಒಕ್ಕೂಟದ ಜಿಲ್ಲಾ ಘಟಕದಿಂದ ನಗರದ ಟಿಪ್ಪು ಸುಲ್ತಾನ್ ಉದ್ಯಾನದಲ್ಲಿ ಬುಧವಾರದಿಂದ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗಿದೆ.</p>.<p>ಮಹಿಳೆ ಮತ್ತು ಮಕ್ಕಳ ರಕ್ಷಣೆಗೆ ಅಗತ್ಯ ಕ್ರಮವನ್ನು ತೆಗೆದುಕೊಳ್ಳಬೇಕು. ಬಾಲಕಿಯರು ಹಾಗೂ ವಿದ್ಯಾರ್ಥಿನಿಯರು ಇರುವ ಕಡೆಗಳಲ್ಲಿ ಪುರುಷರು ಯಾವುದೇ ಕಾರಣಕ್ಕೂ ವಾರ್ಡ್ನಗಳಾಗಿ, ಕಾವಲುಗಾರರನ್ನಾಗಿ, ಅಡುಗೆ ಸಹಾಯಕರ ಹುದ್ದೆಗಳಿಗೆ ನೇಮಕ ಮಾಡಬಾರದು ಎಂದರು.</p>.<p>ಈಚೆಗೆ ಸಿಂಧನೂರು ಹಾಗೂ ರಾಯಚೂರು ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಲಕಿಯರ ಮೇಲೆ ಅತ್ಯಾಚಾರ ನಡೆಯುವುದಕ್ಕೆ ನಿರ್ಲಕ್ಷ್ಯವೆ ಪ್ರಮುಖವಾಗಿದೆ. ಬಹುತೇಕ ಸರ್ಕಾರಿ ಸರ್ಕಾರೇತರ ಸಂಸ್ಥೆಗಳಲ್ಲಿ ಲೈಂಗಿಕ ದೌರ್ಜನ್ಯ ತಡೆಯುವ ಸಮಿತಿಗಳಿರುವುದಿಲ್ಲ. ಇರುವ ಸಮಿತಿಗಳು ಸರಿಯಾಗಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ ಎಂದು ಆರೋಪಿಸಿದರು.</p>.<p>ಅಂಥ ಸಂಸ್ಥೆಗಳ ಸಮಿತಿಗಳ ಮೇಲೆ ಕೂಡಲೇ ಕ್ರಮ ತೆಗೆದುಕೊಳ್ಳಬೇಕು. ಈ ಸಮಿತಿಗಳು ಪ್ರತಿ ತಿಂಗಳು ಸಭೆ ನಡೆಸಿ ದೌರ್ಜನ್ಯ ಪ್ರಕರಣಗಳ ನಡೆಯದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು.</p>.<p>ಮಹಿಳೆಯರ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯಗಳು ನಡೆದ ಸಂದರ್ಭದಲ್ಲಿ ಸಂತ್ರಸ್ತರೊಂದಿಗೆ ಪೊಲೀಸ್ ಹಾಗೂ ಇತರ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ನಡೆದುಕೊಳ್ಳುವ ರೀತಿ ಬದಲಾಗಬೇಕು ಎಂದು ಆಗ್ರಹಿಸಿದರು.</p>.<p>ಸುಪ್ರೀಂಕೋರ್ಟ್ ಆದೇಶದಂತೆ ಇಂಥ ಪ್ರಕರಣಗಳಲ್ಲಿ ಕೂಡಲೇ ಸಂತ್ರಸ್ತರಿಗೆ ನ್ಯಾಯದೊರಕಬೇಕು. ಅನ್ಯಾಯಕ್ಕೊಳಗಾದವರಿಗೆ ಆತ್ಮಸ್ಥೈರ್ಯ ತುಂಬುವ ಕಾರ್ಯ ನಡೆಯಬೇಕು, ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚುವ ಕಾರ್ಯ ನಡೆಯಬೇಕು ಎಂದು ಒತ್ತಾಯಿಸಿದರು.</p>.<p>ಒಕ್ಕೂಟದ ಸಂಚಾಲಕರಾದ ವಿದ್ಯಾಪಾಟೀಲ್, ವಿರುಪಮ್ಮ, ಮೋಕ್ಷಮ್ಮ, ಅಮರಮ್ಮ, ಶರೀಪಮ್ಮ, ಅಂಬಮ್ಮ, ರಂಗಮ್ಮ, ಮಾಳಮ್ಮ, ಮರಿಯಮ್ಮ, ಪ್ರಿಯಾಂಕ, ಮಮತಾ, ಸಾವಿತ್ರಮ್ಮ, ಲಕ್ಷ್ಮೀ ನೇತೃತ್ವ ವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>