ರಾಜ್ಯದಲ್ಲಿ ವೀರಶೈವ ಸಮಾಜ ರಾಜ್ಯ ಮತ್ತು ಜಿಲ್ಲಾ ಘಟಕದಲ್ಲಿ ಸದಸ್ಯತ್ವ ಅಭಿಯಾನವನ್ನು ಹಮ್ಮಿಕೊಂಡಿದ್ದು, ಹೆಚ್ಚೆಚ್ಚು ಸದಸ್ಯರು ನೋಂದಣಿ ಮಾಡಲು ತೀರ್ಮಾನಿಸಲಾಗಿದೆ. ಸಮಾಜದ ಅಭಿವೃದ್ಧಿ ಮತ್ತು ಬೆಳೆವಣಿಗೆ ಘಟಕ ರಚನೆ ಮಾಡಲಾಗಿದೆ. ಸದಸ್ಯರು ಸಕ್ರಿಯವಾಗಿ ತೊಡಗಿಸಿಕೊಂಡು ಪ್ರೋತ್ಸಾಹ ನೀಡಬೇಕು. ಸಂಘದಿಂದ ಸಮಾಜಮುಖಿ ಚಟುವಟಿಕೆಗಳನ್ನು ಮಾಡಲು ಉದ್ದೇಶಿಸಲಾಗಿದೆ ಎಂದು ತಿಳಿಸಿದರು.