ರಾಯಚೂರು: ಚಿರಾಯು ಪ್ರಕಾಶನದಿಂದ ಜನವರಿ 12 ರಂದು ಬೆಳಿಗ್ಗೆ 10 ಗಂಟೆಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಪಯುಕ್ತವಾಗಲಿರುವ ಸಾಮಾನ್ಯ ಜ್ಞಾನ ಒಳಗೊಂಡಿರುವ ‘ಜ್ಞಾನಧಾರೆ’ ಪುಸ್ತಕ ಬಿಡುಗಡೆ ಹಾಗೂ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಮತ್ತು ಉಚಿತ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕಾರ್ಯಾಗಾರವನ್ನು ವೀರಶೈವ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ವಾಲ್ಮೀಕಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಯಲ್ಲಪ್ಪ ಜಾಲಿಬೆಂಚಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಸಕ ಡಾ.ಶಿವರಾಜ ಪಾಟೀಲ ಪುಸ್ತಕ ಲೋಕಾರ್ಪಣೆ ಮಾಡುವರು. ಮಾಜಿ ಸಂಸದ ಬಿ.ವಿ.ನಾಯಕ ಕ್ವಿಜ್ ಕಾರ್ಯಕ್ರಮಕ್ಕೆ ಚಾಲನೆ ನೀಡುವರು. ಸಂಸದ ರಾಜಾ ಅಮರೇಶ್ವರ ನಾಯಕ, ದೇವದುರ್ಗ ಶಾಸಕ ಕೆ.ಶಿವನಗೌಡ ನಾಯಕ ಆಗಮಿಸುವರು ಎಂದು ತಿಳಿಸಿದರು.