ಕವಿತಾಳ: ‘ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಂಡು ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು’ ಎಂದು ರೈತ ಮಹಿಳೆ ಕವಿತಾ ಮಿಶ್ರಾ ಹೇಳಿದರು.
ಪಟ್ಟಣದ ಎಸ್ಬಿಐ ಬ್ಯಾಂಕ್ನಲ್ಲಿ ಹಮ್ಮಿಕೊಂಡಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ‘ಮಹಿಳೆಯರ ಸಬಲೀಕರಣಕ್ಕಾಗಿ ಸರ್ಕಾರ ಅನೇಕ ಯೋಜನೆಗಳನ್ನು ಜಾರಿ ಮಾಡಿದ್ದು ಅವುಗಳ ಪ್ರಯೋಜನ ಪಡೆದುಕೊಳ್ಳಬೇಕು’ ಎಂದರು.
ಬೀದಿ ಬದಿ ವ್ಯಾಪಾರಿಗಳು, ಮಹಿಳಾ ಸ್ವ ಸಹಾಯ ಗುಂಪಿನ ಸದಸ್ಯರು ಮತ್ತು ಕೃಷಿಕ ಮಹಿಳೆಯರಿಗೆ ವ್ಯವಸ್ಥಾಪಕ ಉಮೇಶ ವಡ್ಡರ್ ಸಾಲ ಮಂಜುರಾತಿ ಚೆಕ್ ವಿತರಿಸಿದರು.
ಶೃತಿ, ಇಸ್ಮಾಯಿಲ್ ಮತ್ತು ಸ್ವ ಸಹಾಯ ಗುಂಪಿನ ತಿಮ್ಮಮ್ಮ ಭೋವಿ ಮತ್ತತರರು ಉಪಸ್ಥಿತರಿದ್ದರು.