ರಾಯಚೂರು: ಇಲ್ಲಿನ ಜಿಲ್ಲಾ ಕೋರ್ಟ್ ಸಂಕೀರ್ಣದಲ್ಲಿ ಗಣರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಸ್ತಂಭದ ಬಳಿ ಇರಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರವನ್ನು ಎತ್ತಿಟ್ಟು, ಮಹಾತ್ಮ ಗಾಂಧೀಜಿ ಅವರ ಭಾವಚಿತ್ರವೊಂದಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಲಾಯಿತು.
ಪ್ರಧಾನ ಮತ್ತು ಸತ್ರ ನ್ಯಾಯಾಧೀಶ ಮಲ್ಲಿಕಾರ್ಜುನಗೌಡ ಅವರು ಧ್ವಜಾರೋಹಣ ನೆರವೇರಿಸಿದರು. ಅಂಬೇಡ್ಕರ್ ಅವರ ಭಾವಚಿತ್ರ ತೆಗೆದುಹಾಕಿದ್ದಕ್ಕಾಗಿ ಕೆಲವು ವಕೀಲರು ಆಕ್ರೋಶ ವ್ಯಕ್ತಪಡಿಸಿದರು. ಈ ಸಂಬಂಧ ಕೆಲಕಾಲ ಸ್ಥಳದಲ್ಲಿ ವಾಗ್ವಾದವೂ ನಡೆಯಿತು.
ಅಂಬೇಡ್ಕರ್ ಅವರ ಭಾವಚಿತ್ರ ತೆಗೆಸಿರುವುದಕ್ಕೆ ಸ್ಪಷ್ಟನೆಯನ್ನು ಯಾರೂ ನೀಡಲಿಲ್ಲ. ಆದರೆ,ಸಮಾರಂಭದ ವಿಡಿಯೋ ದೃಶ್ಯಾವಳಿಗಳು ವೈರಲ್ ಆಗಿವೆ.