ರಾಯಚೂರು: ನಗರದ ಕೃಷಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಈಚೆಗೆ ಸ್ವಾಮಿ ವಿವೇಕಾನಂದ ಜಯಂತಿ, ರಾಷ್ಟ್ರೀಯ ಯುವ ದಿನ ಆಚರಣೆ ಜೊತೆಗೆ ರಕ್ತದಾನ ಶಿಬಿರ ನಡೆಸಲಾಯಿತು.
ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಸಚಿವ ಡಾ. ಎಂ. ವೀರನಗೌಡ ಅವರು ದೀಪ ಬೆಳಗಿಸಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ, ಮಾತನಾಡಿದರು.
ರ್ರಿಮ್ಸ್ ರಾಯಚೂರಿನ ರಕ್ತನಿಧಿ ಕೇಂದ್ರದ ವೈಧ್ಯಾಧಿಕಾರಿ ಡಾ.ಗುರುರಾಜ ಕುಲಕರ್ಣಿ ಮಾತನಾಡಿ, ದೇಶದಲ್ಲಿ ರಕ್ತದ ಅಭಾವತೆ ಹಾಗೂ ಅವಶ್ಯಕತೆ ಹೇರಳವಾಗಿರುವುದರಿಂದ ಯುವಕ-ಯುವತಿಯರು ರಕ್ತ ನೀಡಿ ಸಾಯುವ ಜೀವಗಳನ್ನು ಉಳಿಸಲು ಮುಂದೆ ಬರಬೇಕೆಂದು ತಿಳಿಸಿದರು.
ರಾಯಚೂರು ಸರ್ಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ಸಹ-ಪ್ರಾಧ್ಯಾಪಕ ಡಾ.ಪ್ರಾಣೇಶ್ಕುಲಕರ್ಣಿ ಅವರು ವಿಶೇಷ ಉಪನ್ಯಾಸ ನೀಡಿದರು. ಜಿಲ್ಲಾಏಡ್ಸ್ ನಿಯಂತ್ರಣಾಧಿಕಾರಿ ಡಾ.ಸುರೇಂದ್ರಬಾಬು, ಹಾಗೂ ಕೃಷಿ ಮಹಾವಿದ್ಯಾಲಯದ ಡೀನ್ ರಾದ ಡಾ.ಸತ್ಯನಾರಾಯಣರಾವ್ ಇದ್ದರು.
ಕೃಷಿ ತಾಂತ್ರಿಕ ಮಹಾವಿದ್ಯಾಲಯ ಡೀನ್ ಡಾ. ಎಂ.ನೇಮಿಚಂದ್ರಪ್ಪ ಅಧ್ಯಕ್ಷತೆಯನ್ನು ವಹಿಸಿದ್ದರು. ಬಿ.ಟೆಕ್ ಕೃಷಿ ತಾಂತ್ರಿಕ ವಿದ್ಯಾರ್ಥಿ ಮಹೇಶ ನಿರೂಪಿಸಿದರು. ಮೋನಿಷಾ ಸ್ವಾಗತಿಸಿದರು ಮತ್ತು ಕಿರಣಕುಮಾರ ವಂದಿಸಿದರು.