<p><strong>ರಾಯಚೂರು: </strong>ದೇಶದಲ್ಲಿ ಭಯೋತ್ಪಾದನೆಯಂತಹ ಮಾನವಕುಲ ನಾಶ ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಬಗ್ಗೆ ವಿದ್ಯಾರ್ಥಿ ಯುವ ಸಮೂಹವು ಯಾವ ರೀತಿ ಸ್ಪಂದಿಸುತ್ತದೆ. ಅವರಲ್ಲಿರುವ ಅಭಿಪ್ರಾಯವೇನು ಎಂಬುದನ್ನು ಅರಿಯುವ ಉದ್ದೇಶಕ್ಕಾಗಿ ಯುವ ಸಂಸತ್ ದೇಶದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ರಾಯಚೂರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ಎಂ. ಹೇಳಿದರು.</p>.<p>ನಗರದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕೇಂದ್ರದ ಕ್ರೀಡಾ ಇಲಾಖೆಯ ಎನ್ಎಸ್ಎಸ್ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ನೆಹರು ಯುವ ಕೇಂದ್ರ ಮತ್ತು ಪ್ರಥಮ ದರ್ಜೆ ಕಾಲೇಜಿನಿಂದ ಸೋಮವಾರ ಏರ್ಪಡಿಸಿದ್ದ ‘ಯುಥ್ ಪಾರ್ಲಿಮೆಂಟ್ ಫೆಸ್ಟಿವಲ್–2019’ ಉದ್ಘಾಟಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯುವ ಸಂಸತ್ ಆಯೋಜಿಸಲಾಗುತ್ತಿದೆ. ಜ್ವಲಂತ ವಿಷಯಗಳ ಕುರಿತು ಮಾತನಾಡಲು ಅವಕಾಶ ನೀಡಲಾಗುವುದು. ವಾಕ್ ಚಾತುರ್ಯ, ನಾಯಕತ್ವ ಗುಣಗಳನ್ನು ಪರಿಶೀಲಿಸಿ ಜಿಲ್ಲೆಯಿಂದ ಮೂವರನ್ನು ಆಯ್ಕೆ ಮಾಡಿ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು ಎಂದರು.</p>.<p>ರಾಯಚೂರು ಮತ್ತು ಯಾದಗಿರಿ ಒಟ್ಟಾಗಿ ಜಿಲ್ಲಾಮಟ್ಟದ ಸ್ಪರ್ಧೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ಅವಕಾಶ ಸಿಕ್ಕಿದೆ. ಜಾಗತಿಕ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳು ತಮಗೆ ಅನಿಸುವ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಟ್ಟೆಪ್ಪ, ಪ್ರಾಧ್ಯಾಪಕ ಜೆ.ಎಲ್. ಜೆ.ಎಲ್. ಈರಣ್ಣ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ದಸ್ತಗಿರಸಾಬ್ ದಿನ್ನಿ ಮಾತನಾಡಿ, ಪ್ರತಿಯೊಂದು ವಿಷಯಕ್ಕೆ ವಿದ್ಯಾರ್ಥಿಗಳಲ್ಲಿ ಸ್ಪಂದಿಸುವ ಮನೋಭಾವ ತುಂಬಾ ಮುಖ್ಯ. ಪ್ರಶ್ನಿಸುವ ಗುಣ ಇರಬೇಕು. ಇದರಿಂದ ಹೆಚ್ಚು ವಿಷಯಾಸಕ್ತಿ ಬೆಳೆಯುತ್ತದೆ. ಈ ಮೂಲಕ ಒಳ್ಳೆಯ ನಾಯಕರಾಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ಯುವ ಸಂಸತ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.</p>.<p>ಸಾಮಾಜಿಕ ಕಾರ್ಯಕರ್ತ ಭೀಮನಗೌಡ ಇಟಗಿ, ವಕೀಲ ವೇಣು ಜಾಲಿಬೆಂಚಿ, ಸಹಾಯಕ ಪ್ರಾಧ್ಯಾಪಕರಾದ ಪುಷ್ಪಾ, ಶಿವಯ್ಯ ಹಿರೇಮಠ, ಮಲ್ಲಣಗೌಡ, ಗೌಡಪ್ಪ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ರಾಯಚೂರು: </strong>ದೇಶದಲ್ಲಿ ಭಯೋತ್ಪಾದನೆಯಂತಹ ಮಾನವಕುಲ ನಾಶ ಮಾಡುವ ಕೃತ್ಯಗಳು ನಡೆಯುತ್ತಿವೆ. ಈ ಬಗ್ಗೆ ವಿದ್ಯಾರ್ಥಿ ಯುವ ಸಮೂಹವು ಯಾವ ರೀತಿ ಸ್ಪಂದಿಸುತ್ತದೆ. ಅವರಲ್ಲಿರುವ ಅಭಿಪ್ರಾಯವೇನು ಎಂಬುದನ್ನು ಅರಿಯುವ ಉದ್ದೇಶಕ್ಕಾಗಿ ಯುವ ಸಂಸತ್ ದೇಶದಾದ್ಯಂತ ಆಯೋಜಿಸಲಾಗುತ್ತಿದೆ ಎಂದು ರಾಯಚೂರಿ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪಾಂಡುರಂಗ ಎಂ. ಹೇಳಿದರು.</p>.<p>ನಗರದ ಪ್ರಥಮ ದರ್ಜೆ ಕಾಲೇಜು ಸಭಾಂಗಣದಲ್ಲಿ ಕೇಂದ್ರದ ಕ್ರೀಡಾ ಇಲಾಖೆಯ ಎನ್ಎಸ್ಎಸ್ ಯೋಜನೆ, ಗುಲಬರ್ಗಾ ವಿಶ್ವವಿದ್ಯಾಲಯ, ನೆಹರು ಯುವ ಕೇಂದ್ರ ಮತ್ತು ಪ್ರಥಮ ದರ್ಜೆ ಕಾಲೇಜಿನಿಂದ ಸೋಮವಾರ ಏರ್ಪಡಿಸಿದ್ದ ‘ಯುಥ್ ಪಾರ್ಲಿಮೆಂಟ್ ಫೆಸ್ಟಿವಲ್–2019’ ಉದ್ಘಾಟಿಸಿ ಮಾತನಾಡಿದರು.</p>.<p>ಕೇಂದ್ರ ಸರ್ಕಾರದ ನಿರ್ದೇಶನದಂತೆ ಜಿಲ್ಲಾ, ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಯುವ ಸಂಸತ್ ಆಯೋಜಿಸಲಾಗುತ್ತಿದೆ. ಜ್ವಲಂತ ವಿಷಯಗಳ ಕುರಿತು ಮಾತನಾಡಲು ಅವಕಾಶ ನೀಡಲಾಗುವುದು. ವಾಕ್ ಚಾತುರ್ಯ, ನಾಯಕತ್ವ ಗುಣಗಳನ್ನು ಪರಿಶೀಲಿಸಿ ಜಿಲ್ಲೆಯಿಂದ ಮೂವರನ್ನು ಆಯ್ಕೆ ಮಾಡಿ ರಾಜ್ಯಮಟ್ಟಕ್ಕೆ ಕಳುಹಿಸಲಾಗುವುದು ಎಂದರು.</p>.<p>ರಾಯಚೂರು ಮತ್ತು ಯಾದಗಿರಿ ಒಟ್ಟಾಗಿ ಜಿಲ್ಲಾಮಟ್ಟದ ಸ್ಪರ್ಧೆ ನಡೆಯುತ್ತಿದ್ದು, ವಿದ್ಯಾರ್ಥಿಗಳು ತಮ್ಮ ಪ್ರತಿಭೆ ಪ್ರದರ್ಶಿಸಲು ಇದೊಂದು ಅವಕಾಶ ಸಿಕ್ಕಿದೆ. ಜಾಗತಿಕ ಆಗುಹೋಗುಗಳ ಬಗ್ಗೆ ವಿದ್ಯಾರ್ಥಿಗಳು ತಮಗೆ ಅನಿಸುವ ಭಾವನೆಗಳನ್ನು ಮುಕ್ತವಾಗಿ ಹಂಚಿಕೊಳ್ಳಬಹುದು ಎಂದು ತಿಳಿಸಿದರು.</p>.<p>ಯಾದಗಿರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಜಟ್ಟೆಪ್ಪ, ಪ್ರಾಧ್ಯಾಪಕ ಜೆ.ಎಲ್. ಜೆ.ಎಲ್. ಈರಣ್ಣ ಮಾತನಾಡಿದರು.</p>.<p>ಅಧ್ಯಕ್ಷತೆ ವಹಿಸಿದ್ದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲ ದಸ್ತಗಿರಸಾಬ್ ದಿನ್ನಿ ಮಾತನಾಡಿ, ಪ್ರತಿಯೊಂದು ವಿಷಯಕ್ಕೆ ವಿದ್ಯಾರ್ಥಿಗಳಲ್ಲಿ ಸ್ಪಂದಿಸುವ ಮನೋಭಾವ ತುಂಬಾ ಮುಖ್ಯ. ಪ್ರಶ್ನಿಸುವ ಗುಣ ಇರಬೇಕು. ಇದರಿಂದ ಹೆಚ್ಚು ವಿಷಯಾಸಕ್ತಿ ಬೆಳೆಯುತ್ತದೆ. ಈ ಮೂಲಕ ಒಳ್ಳೆಯ ನಾಯಕರಾಗಲು ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳಿಗೆ ಯುವ ಸಂಸತ್ ಉತ್ತಮ ವೇದಿಕೆಯಾಗಿದೆ ಎಂದು ಹೇಳಿದರು.</p>.<p>ಸಾಮಾಜಿಕ ಕಾರ್ಯಕರ್ತ ಭೀಮನಗೌಡ ಇಟಗಿ, ವಕೀಲ ವೇಣು ಜಾಲಿಬೆಂಚಿ, ಸಹಾಯಕ ಪ್ರಾಧ್ಯಾಪಕರಾದ ಪುಷ್ಪಾ, ಶಿವಯ್ಯ ಹಿರೇಮಠ, ಮಲ್ಲಣಗೌಡ, ಗೌಡಪ್ಪ ಪಾಟೀಲ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>