ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವ ಸಪ್ತಾಹ ಜಾಥಾ

Last Updated 16 ಜನವರಿ 2020, 12:49 IST
ಅಕ್ಷರ ಗಾತ್ರ

ರಾಯಚೂರು: ಸ್ವಾಮಿ ವಿವೇಕಾನಂದರ ಜನ್ಮದಿನಾಚರಣೆ ಅಂಗವಾಗಿ ರಾಷ್ಟ್ರೀಯ ಯುವ ಸಪ್ತಾಹ ಜಾಥಾಕ್ಕೆ ಜಿಲ್ಲಾ ಕ್ಷಯರೋಗ ನಿಯಂತ್ರಣ ಅಧಿಕಾರಿ ಡಾ.ಸುರೇಂದ್ರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಜಿಲ್ಲಾ ಕ್ರೀಡಾಂಗಣದಿಂದ ಪ್ರಾರಂಭವಾದ ಜಾಥಾವು ನಗರದ ವಿವಿಧ ವೃತ್ತಗಳ ಮೂಲಕ ತೆರಳಿ ಮಾವಿನಕೆರೆ ದಡದಲ್ಲಿರುವ ಸ್ವಾಮಿ ವಿವೇಕಾನಂದರ ಪುತ್ತಳಿಗೆ ತೆರಳಲಾಯಿತು. ಈ ಜಾಥಾದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾಧಿಕಾರಿ ರಾಜು, ಶ್ರೀನಿವಾಸ ರಾಯಚೂರುಕರ್, ವಕೀಲ ಅತಾವುಲ್ಲ ಸೇರಿದಂತೆ ಅನೇಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರೀನ್ ರಾಯಚೂರು, ರೆಡ್ ಕ್ರಾಸ್ ಸಂಸ್ಥೆ, ಭಾರತ ಸೇವಾದಳ, ಯುವ ಸ್ಪಂದನ, ಸ್ನಾತಕೋತ್ತರ ಕಾಲೇಜು ಹಾಗೂ ವಿವೇಕಾನಂದ ಬಿಪಿಇಡಿ ಕಾಲೇಜು ಸಹಯೋಗದಲ್ಲಿ ಈ ಜಾಥಾ ಆಯೋಜಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT